ಬೆಳ್ತಂಗಡಿ: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ಲಿ) ಮಂಗಳೂರು ಇದರ ಆಡಳಿತ ಮಂಡಳಿಗೆ ನಾಮ ನಿರ್ದೇಶಿತ ನಿರ್ದೇಶಕರಾಗಿ ಜಿ. ಬಾಲಕೃಷ್ಣ ಭಂಡಾರಿ ಕೋಡ್ಯೇಲು ಮಡಂತ್ಯಾರು ಆಯ್ಕೆಯಾಗಿದ್ದಾರೆ.
ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಳೆದ 36 ವರ್ಷಗಳಿಂದ ಪ್ರಾಮಾಣಿಕ ಸೇವೆಯನ್ನ ನೀಡುತ್ತಿರುವ ಇವರು ಭಂಡಾರಿ ಸಮಾಜ ಸಂಘದ ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷರಾಗಿಯು ಸೇವೆಯನ್ನು ನೀಡುತ್ತಿದ್ದಾರೆ.











