ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕ ಕೆ ವಿನಾಯಕ ರಾವ್ ಮತ್ತು ತಂಡವು ನ. 18 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಸಿಎಸ್.ಆರ್ ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು. ಶ್ರೀಯುತರು ಕಟ್ಟಡ ನಿರ್ಮಾಣ ಶೀಘ್ರ ನೆರವೇರುವಂತೆ ಶುಭ ಹಾರೈಸಿದರು.











