23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಒಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 3 ದಿನಗಳ ಉಚಿತ ಸೀರೆ ಗೊಂಡೆ ಹಾಕುವ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರುಪಂಥ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣ ಕಲ್ಲೇರಿ ಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜ್ಯೋತಿ ರಾಜ್ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಕರೆ ನೀಡಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ ಸೀರೆ ಗೊಂಡೆ ಹಾಕಿ ಸ್ವ ಉದ್ಯೋಗ ಮಾಡಲು ಇರುವ ಅವಕಾಶ ಗಳ ಬಗ್ಗೆ ತಿಳಿಸಿ ತರಬೇತಿ ನಂತರ ಎಲ್ಲಾ ಅವಕಾಶ ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿ, ಬ್ಯಾಂಕ್ ನಲ್ಲಿ ಸ್ವ ಉದ್ಯೋಗ ಕ್ಕೆ ಸಿಗುವ ಸೌಲಭ್ಯ ಗಳ ಬಗ್ಗೆ ವಿವರಿಸಿದರು. ಬ್ಯಾಂಕ ಬರೋಡ ಝೋನಲ್ ಆಫೀಸ್ ಮಂಗಳೂರು ಇಲ್ಲಿಯ ಹಿಂದಿ ರಾಜ್ಯ ಭಾಷಾ ವಿಭಾಗದ ಮುಖ್ಯ ವ್ಯವಸ್ಥಾಪಕರಾದ ಡಾ. ಬಾಲ ಮುರುಗನ್ ತರಬೇತಿ ಪಡೆದ ಮಹಿಳೆಯರ ಕೌಶಲ್ಯ ದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇಲ್ಲಿಯ ವಿಜ್ಞಾನಿ ಡಾ. ಕೇದಾರ್ನಾಥ್ ಕೃಷಿ ವಿಜ್ಞಾನ ಕೇಂದ್ರ ದಲ್ಲಿ ಮಹಿಳೆಯರಿಗೆ ಸಿಗುವ ಕೃಷಿ ಆಧಾರಿತ ತರಬೇತಿಗಳ ಬಗ್ಗೆ ಮಾಹಿತಿ ನೀಡಿದರು.ತರಬೇತಿ ಪೂರೈಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ ಸತೀಶ್ ನಾಯಕ್, ವರಲಕ್ಷ್ಮಿ ಪೂಜಾ ಸಂಘದ ಅಧ್ಯಕ್ಷರಾದ ಪ್ರಮೀಳಾ, ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು

ವಿದ್ಯಾ ಶ್ರೀ ಕಾರ್ಯಕ್ರಮ ನಿರೂಪಿಸಿ,ಸೌಜನ್ಯ ಸ್ವಾಗತಿಸಿ, ರತ್ನವತಿ ಧನ್ಯವಾದ ಗೈದರು. 3 ತಿಂಗಳ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು.

Related posts

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!