23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಉರುವಾಲು ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆ ಹಾಗೂ ಅಥರ್ವ ಶೀರ್ಷ ಗಣಯಾಗ ಹಾಗೂ ಮಹಾಚಂಡಿಕಾ ಯಾಗವು ಡಿ.6,7,8 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ನ.18ರಂದು ಶಶಿಧರ ಶೆಟ್ಟಿ ಬರೋಡ ರವರ ಮನೆಯಲ್ಲಿ ಜರುಗಿತು.

ಆಮಂತ್ರಣ ಪತ್ರಿಕೆಯನ್ನು ಶ್ರೀ ಗಣೇಶ ಭಜನಾ ಮಂಡಳಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಮೊಕ್ತೇಸರರು ಯೋಗೀಶ್ ಪೂಜಾರಿ ಕಡ್ತಿಲ, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟ್ ಅಧ್ಯಕ್ಷ ರೋಹಿತ ಶೆಟ್ಟಿ ಪಿ. ಕುಪ್ಪೆಟ್ಟಿ, ನಟ್ಟಬೈಲು ಶ್ರೀ ರಾಮ ವಿದ್ಯಾಕೇಂದ್ರ ಅಧ್ಯಕ್ಷ ಸುನಿಲ್ ಅಣವು, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ರಮೇಶ ಗೌಡ, ಉರುವಾಲು ಬೂತ್ ಸಮಿತಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮುಂಡ್ರೋಟ್ಟು, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ಜಯರಾಮ ನಾಯ್ಕ್ ಹಲೇಜಿ, ಕುಪ್ಪೆಟ್ಟಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಪೂಂಜ ಬರಮೇಲು, ಆರ್ಥಿಕ ಸಮಿತಿ ಮತ್ತು ಅನ್ನದಾನ ಸಮಿತಿಯ ಸಂಚಾಲಕ ಪ್ರಭಾಕರ ಗೌಡ ಪೋಸಂತೋಡಿ, ಜನಾರ್ಧನ ಗೌಡ ಬೇಂಗೈ, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ಪುರುಷೋತ್ತಮ ಪೂಜಾರಿ ಉಪಸ್ಥಿತರಿದ್ದರು.

Related posts

ಬೆಳಾಲು: ಪೆರಿಯಡ್ಕ ಶಾಲಾ ರಜತ ಮಹೋತ್ಸವ: ಪ್ರವೇಶ ದ್ವಾರ ಲೋಕಾರ್ಪಣೆ- ಸಭಾ ಕಾರ್ಯಕ್ರಮ

Suddi Udaya

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya
error: Content is protected !!