September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಉರುವಾಲು ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆ ಹಾಗೂ ಅಥರ್ವ ಶೀರ್ಷ ಗಣಯಾಗ ಹಾಗೂ ಮಹಾಚಂಡಿಕಾ ಯಾಗವು ಡಿ.6,7,8 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ನ.18ರಂದು ಶಶಿಧರ ಶೆಟ್ಟಿ ಬರೋಡ ರವರ ಮನೆಯಲ್ಲಿ ಜರುಗಿತು.

ಆಮಂತ್ರಣ ಪತ್ರಿಕೆಯನ್ನು ಶ್ರೀ ಗಣೇಶ ಭಜನಾ ಮಂಡಳಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಮೊಕ್ತೇಸರರು ಯೋಗೀಶ್ ಪೂಜಾರಿ ಕಡ್ತಿಲ, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟ್ ಅಧ್ಯಕ್ಷ ರೋಹಿತ ಶೆಟ್ಟಿ ಪಿ. ಕುಪ್ಪೆಟ್ಟಿ, ನಟ್ಟಬೈಲು ಶ್ರೀ ರಾಮ ವಿದ್ಯಾಕೇಂದ್ರ ಅಧ್ಯಕ್ಷ ಸುನಿಲ್ ಅಣವು, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ರಮೇಶ ಗೌಡ, ಉರುವಾಲು ಬೂತ್ ಸಮಿತಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮುಂಡ್ರೋಟ್ಟು, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ಜಯರಾಮ ನಾಯ್ಕ್ ಹಲೇಜಿ, ಕುಪ್ಪೆಟ್ಟಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಪೂಂಜ ಬರಮೇಲು, ಆರ್ಥಿಕ ಸಮಿತಿ ಮತ್ತು ಅನ್ನದಾನ ಸಮಿತಿಯ ಸಂಚಾಲಕ ಪ್ರಭಾಕರ ಗೌಡ ಪೋಸಂತೋಡಿ, ಜನಾರ್ಧನ ಗೌಡ ಬೇಂಗೈ, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ಪುರುಷೋತ್ತಮ ಪೂಜಾರಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya
error: Content is protected !!