23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

ಪುಂಜಾಲಕಟ್ಟೆ ವಲಯದ ಉಳಿ ಯುವಕ ಮಂಡಲ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ಸಹಕಾರದಿಂದ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇಲ್ಲಿನ ವಿಶ್ವಗೀತಾ ಪರ್ಯಾಯ 2024-2026 ಇದರ ಗೀತೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಕಮ್ಮಟದ ಹಿರಿಯ ಸಂಪನ್ಮೂಲ ವ್ಯಕ್ತಿ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರಿಂದ ಉಳಿ ಯುವಕ ಮಂಡಲದ ಸಭಾಂಗಣದಲ್ಲಿ ಭಜನಾ ತರಬೇತಿ ಕಾರ್ಯಗಾರ ನಡೆಯಿತು.

ತಾಲೂಕಿನ 7 ಭಜನಾ ಮಂಡಳಿಯ ಸುಮಾರು 250 ಭಜಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಜನೆ ಮಂಡಳಿಗಳಿಗೆ ಭಜನೆ ತರಬೇತಿ ನೀಡಲಾಯಿತು. ಈ ತರಬೇತಿ ಕಾರ್ಯಗಾರದಲ್ಲಿ ಶ್ರೀಮತಿ ಸಾವಿತ್ರಿ ಮೇಡಂ, ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ, ಭಜನಾ ಪರಿಷತ್ ನ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಪಿ ಅಳಿಯೂರು, ಭಜನಾ ತರಬೇತುದಾರರು, ಉಳಿ ಯುವಕ ಮಂಡಲದ ಕಾರ್ಯದರ್ಶಿ ರಾಜ್ ಕುಮಾರ್, ಕೇಂದ್ರ ಒಕ್ಕೂಟದ ಅಧ್ಯಕ್ಷರು ಚಿದಾನಂದ ರೈ ಕಕ್ಯ,ವಲಯ ಮೇಲ್ವಿಚಾರಕಿ ಶ್ರೀಮತಿ ಸವಿತಾ, ಸೇವಾಪ್ರತಿನಿಧಿ ಶೇಖರ್ ಉಷಾ ಸುಧಾ ಕುಸುಮ ಹಾಗೂ ಭಜನೆ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.


ಸಂತೋಷ್ ಕಾರ್ಯಕ್ರಮದ ನಿರೂಪಿಸಿ, ರಾಜ್ ಕುಮಾರ್ ದನ್ಯವಾದವಿತ್ತರು.

Related posts

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!