September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

ಪುಂಜಾಲಕಟ್ಟೆ ವಲಯದ ಉಳಿ ಯುವಕ ಮಂಡಲ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ಸಹಕಾರದಿಂದ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇಲ್ಲಿನ ವಿಶ್ವಗೀತಾ ಪರ್ಯಾಯ 2024-2026 ಇದರ ಗೀತೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಕಮ್ಮಟದ ಹಿರಿಯ ಸಂಪನ್ಮೂಲ ವ್ಯಕ್ತಿ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರಿಂದ ಉಳಿ ಯುವಕ ಮಂಡಲದ ಸಭಾಂಗಣದಲ್ಲಿ ಭಜನಾ ತರಬೇತಿ ಕಾರ್ಯಗಾರ ನಡೆಯಿತು.

ತಾಲೂಕಿನ 7 ಭಜನಾ ಮಂಡಳಿಯ ಸುಮಾರು 250 ಭಜಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಜನೆ ಮಂಡಳಿಗಳಿಗೆ ಭಜನೆ ತರಬೇತಿ ನೀಡಲಾಯಿತು. ಈ ತರಬೇತಿ ಕಾರ್ಯಗಾರದಲ್ಲಿ ಶ್ರೀಮತಿ ಸಾವಿತ್ರಿ ಮೇಡಂ, ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ, ಭಜನಾ ಪರಿಷತ್ ನ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಪಿ ಅಳಿಯೂರು, ಭಜನಾ ತರಬೇತುದಾರರು, ಉಳಿ ಯುವಕ ಮಂಡಲದ ಕಾರ್ಯದರ್ಶಿ ರಾಜ್ ಕುಮಾರ್, ಕೇಂದ್ರ ಒಕ್ಕೂಟದ ಅಧ್ಯಕ್ಷರು ಚಿದಾನಂದ ರೈ ಕಕ್ಯ,ವಲಯ ಮೇಲ್ವಿಚಾರಕಿ ಶ್ರೀಮತಿ ಸವಿತಾ, ಸೇವಾಪ್ರತಿನಿಧಿ ಶೇಖರ್ ಉಷಾ ಸುಧಾ ಕುಸುಮ ಹಾಗೂ ಭಜನೆ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.


ಸಂತೋಷ್ ಕಾರ್ಯಕ್ರಮದ ನಿರೂಪಿಸಿ, ರಾಜ್ ಕುಮಾರ್ ದನ್ಯವಾದವಿತ್ತರು.

Related posts

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya
error: Content is protected !!