September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

ಬೆಳ್ತಂಗಡಿ : ಬಂದಾರು ಗ್ರಾಮದ ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಸಮಾಲೋಚನಾ ಸಭೆಯು ಭಾನುವಾರ ದೇವಸ್ಥಾನದ ವಠಾರದಲ್ಲಿ ನೆರವೇರಿತು.

ಆಡಳಿತ ಮಂಡಳಿ ಅಧ್ಯಕ್ಷ ನಾಣ್ಯಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ಈಗಾಗಲೇ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ರೂ.
25 ಲಕ್ಷ ಅನುದಾನ ಮಂಜೂರಾಗಿದ್ದು ತಾಂತ್ರಿಕ ಕಾರಣಕ್ಕಾಗಿ ಅನುದಾನವನ್ನು ವಿನಿಯೋಗಿಸಲು ಸಾಧ್ಯವಾಗಿರುವುದಿಲ್ಲ ಕೂಡಲೇ ಸೂಕ್ತ ರೀತಿಯಲ್ಲಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಕೊಂಡಲ್ಲಿ ಮಂಜೂರಾದ ಅನುದಾನವನ್ನು ವಿನಿಯೋಗಿಸಲು ಅನುಕೂಲವಾಗುತ್ತದೆ. ಈ ಬಗ್ಗೆ ಆಡಳಿತ ಸಮಿತಿ ಕೂಡಲೇ ಕಾರ್ಯ ಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು.

ದೇವಸ್ಥಾನದ ಜೀರ್ಣೋದ್ಧಾರದ ಭಾಗ್ಯ ನಮಗೆ ದೊರೆತಿದೆ, ಎರಡು ವರ್ಷದಲ್ಲಿ ತಿಂಗಳಿಗೆ ಒಂದು ಸಾವಿರದಂತೆ ವರ್ಷಕ್ಕೆ ಹನ್ನೆರಡು ಸಾವಿರ ರೂಪಾಯಿ, ಎರಡು ವರ್ಷಕ್ಕೆ 24 ಸಾವಿರ ರೂಪಾಯಿಗಳನ್ನು ಕೊಡುವುದು ಗ್ರಾಮದ ಭಕ್ತಾದಿಗಳಿಗೆ ಕಷ್ಟವೇನಲ್ಲ, ಇಷ್ಟು ಕೊಡಲು ಸಾಧ್ಯವಿಲ್ಲದವರು ಈ ಕಾಲದಲ್ಲಿ ಯಾರೂ ಇರಲಿಕ್ಕಿಲ್ಲ ಎಂದರು.
ದೇವಸ್ಥಾನಕ್ಕೆ ಬರುವಾಗ ರಾಜಕೀಯವನ್ನು ಹೊರಗಿಟ್ಟು ಬರಬೇಕು, ಅವನು ಕಾಂಗ್ರೆಸ್ ಪಕ್ಷದವನು , ಇವನು ಬಿಜೆಪಿ ಪಕ್ಷದವನು ಎನ್ನುವುದನ್ನು ಬಿಡಬೇಕು ಇಲ್ಲಿ ಬಂದಮೇಲೆ ಎಲ್ಲರೂ ದೇವರ ಪಕ್ಷ, ಇಲ್ಲಿ ಬಂದ ಮೇಲೆ ನಾವೆಲ್ಲರೂ ದೇವರ ಜಾತಿ ಮಾತ್ರ , ಅವನು ಸ್ಪೃಶ್ಯ, ಇವನು ಅಸ್ಪೃಶ್ಯ ಎಂಬುದನ್ನು ಬಿಟ್ಟು ಎಲ್ಲರೂ ಒಂದಾಗಿ ದುಡಿಯಬೇಕು, ನನ್ನನ್ನೂ ಅಷ್ಟೇ , ಶಾಸಕನೆಂದು ಕರೆಯಬೇಡಿ ಇಲ್ಲಿ ನಾನೂ ಭಕ್ತ ಎಂದು ಶಾಸಕ ಹರೀಶ್ ಪೂಂಜ ಸಮಾಲೋಚನಾ ಸಭೆಯಲ್ಲಿ ಮಾರ್ಮಿಕವಾಗಿ
ಕಿವಿ ಮಾತು ಹೇಳಿದರು.

ಈ ಹಿಂದೆ ಮಂಜೂರಾದ ಅನುದಾನದ ಜೊತೆಗೆ ಅನಿವಾರ್ಯವಾದರೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ಒದಗಿಸಲು ಒರ್ವ ಭಕ್ತನಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಅವರು ಭರವಸೆ ನೀಡಿದರು.
ವೇದಿಕೆಯಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಸೂರ್ಯ ನಾರಾಯಣ ಕುಡುಮತ್ತಾಯ, ದೇಜಪ್ಪ ಗೌಡ ಪೊಯ್ಯೋಳೆ ,ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ, ಮಿತ್ತಬಾಗಿಲು ಪಂ. ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ, ಲಿಂಗಪ್ಪ ಗೌಡ ಪೊಯ್ಯೋಳೆ, ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣೆಕ್ಕರ, ಎಸ್.ಕೆ.ಡಿ.ಆರ್.ಡಿ.ಪಿ. ಬಿ.ಸಿ. ಟ್ರಸ್ಟ್ ಮೇಲ್ವಿಚಾರಕಿ ಕು.ಶಿಲ್ಪಾ, ಒಕ್ಕೂಟದ ಅಧ್ಯಕ್ಷೆ ವಿಜಯ ಉಪಸ್ಥಿತರಿದ್ದರು.


ರಂಜನ್ ಗೌಡ ಪ್ರಸ್ತಾವನೆಗೈದರು. ಧರ್ಣಪ್ಪ ಗೌಡ ಬಾನಡ್ಕ, ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಅಶೋಕ್ ಪಾಂಜಾಳ,
ಸಿ.ಎ. ನಿರ್ದೇಶಕರಾದ ಪ್ರಭಾಕರ ಗೌಡ, ಉದಯ ಕುಮಾರ್ ಬಿ.ಕೆ., ಮುಂತಾದವರು ಉಪಸ್ಥಿತರಿದ್ದರು.

ಶಿಕ್ಷಕಿ ರೇಖಾ ಕಾರ್ಯಕ್ರಮ ನಿರೂಪಿಸಿದರು. ಪ್ರೀತಮ್ ಸ್ವಾಗತಿಸಿ ಗಣೇಶ್ ಗೌಡ ವಂದಿಸಿದರು.

Related posts

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಕರಾಯ ಸರ್ಕಾರಿ ಪ್ರೌಢಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ಕುಡಿಯುವ ನೀರಿನ ಯಂತ್ರ ಕೊಡುಗೆ

Suddi Udaya
error: Content is protected !!