ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಬೆಂಗಳೂರು ರೋಟರಿ ಇಂದಿರಾ ನಗರ ಸಹಭಾಗಿತ್ವದಲ್ಲಿ ರೂ. 10,80,000/- ವಿದ್ಯಾರ್ಥಿ ವೇತನವನ್ನು, ಬೆಳ್ತಂಗಡಿ ತಾಲೂಕಿನ 270 ಅರ್ಹ ಪಿಯು ವಿದ್ಯಾರ್ಥಿಗಳಿಗೆ ತಲಾ ರೂ 4000/-ದಂತೆ ನೀಡಲಿದೆ.

ಈ 10,80,000/- ಮೊತ್ತದಲ್ಲಿ, ಬೆಂಗಳೂರು ರೋಟರೀ ಇಂದಿರಾ ನಗರದ ಕೊಡುಗೆ 8,10,000/-, ರೋಟರೀ ಕ್ಲಬ್ ಬೆಳ್ತಂಗಡಿ ಕೊಡುಗೆ 1,70,000/-, ಮತ್ತು ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ (ರಿ) ಕೊಡುಗೆ ರೂ. ಒಂದು ಲಕ್ಷ ಇರಲಿದೆ.


ನ.25 ರಂದು ರೋಟರೀ ಭವನದಲ್ಲಿ ನಡೆಯಲಿರುವ ವಿದ್ಯಾರ್ಥಿ ವೇತನ ವಿತರಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭುಗಳು ವಹಿಸಲಿರುವರು. ಉದ್ಘಾಟನೆಯನ್ನು ಬೆಂಗಳೂರು ರೋಟರಿ ಇಂದಿರಾನಗರದ ಮಾಜಿ ಅಧ್ಯಕ್ಷ ರೋ. ಜಗದೀಶ ಮುಗುಳಿ ಮಾಡಲಿರುವರು. ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ ಇದರ ಅಧ್ಯಕ್ಷ ಶ್ರೀಧರ ಪಡ್ವೆಟ್ನಾಯ, ರೋಟರಿ ಜಿಲ್ಲೆ 3181 ಇದರ ಮುಂದಿನ ವರ್ಷದ ಜಿಲ್ಲಾಧ್ಯಕ್ಷ ರೊ. ಸತೀಶ್ ಬೋಳಾರರು ಮುಖ್ಯ ಅತಿಥಿಗಳಾಗಿಯೂ, ಉಜಿರೆ ಸಂಧ್ಯಾ ಫ್ರೆಶ್ ಮಾಲಕ ರಾಜೇಶ ಪೈ, ಅಸಿಸ್ಟೆಂಟ್ ಗವರ್ನರ್ ರೊ. ಡಾ ಎ.ಜಯಕುಮಾರ ಶೆಟ್ಟಿ, ವಲಯ ಸೇನಾನಿ ರೊ. ಸುರೇಶ ಸಾಲಿಯಾನ್, ರೋಟರಿ ಸೇವಾ ಟ್ರಸ್ಟ್ ಅಧ್ಯಕ್ಷ ರೋ. ಶ್ರೀಕಾಂತ ಕಾಮತ್, ಸ್ಕಾಲರ್ ಶಿಪ್ ಸಮಿತಿಯ ಚೆಯರ್ ಮ್ಯಾನ್ ರೊ. ಅಬೂಬಕ್ಕರ್ ಯು.ಎಚ್ ಇವರು ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ತಮ್ಮ ಪ್ರಕಟಣೆಯಲ್ಲಿ ಪ್ರೊ. ಪ್ರಕಾಶ ಪ್ರಭು ತಿಳಿಸಿದ್ದಾರೆ.

Related posts

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಜೀರ್ಣೋದ್ದಾರಗೊಳ್ಳುತ್ತಿರುವ ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಮಂದಿರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya
error: Content is protected !!