25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಬೆಂಗಳೂರು ರೋಟರಿ ಇಂದಿರಾ ನಗರ ಸಹಭಾಗಿತ್ವದಲ್ಲಿ ರೂ. 10,80,000/- ವಿದ್ಯಾರ್ಥಿ ವೇತನವನ್ನು, ಬೆಳ್ತಂಗಡಿ ತಾಲೂಕಿನ 270 ಅರ್ಹ ಪಿಯು ವಿದ್ಯಾರ್ಥಿಗಳಿಗೆ ತಲಾ ರೂ 4000/-ದಂತೆ ನೀಡಲಿದೆ.

ಈ 10,80,000/- ಮೊತ್ತದಲ್ಲಿ, ಬೆಂಗಳೂರು ರೋಟರೀ ಇಂದಿರಾ ನಗರದ ಕೊಡುಗೆ 8,10,000/-, ರೋಟರೀ ಕ್ಲಬ್ ಬೆಳ್ತಂಗಡಿ ಕೊಡುಗೆ 1,70,000/-, ಮತ್ತು ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ (ರಿ) ಕೊಡುಗೆ ರೂ. ಒಂದು ಲಕ್ಷ ಇರಲಿದೆ.


ನ.25 ರಂದು ರೋಟರೀ ಭವನದಲ್ಲಿ ನಡೆಯಲಿರುವ ವಿದ್ಯಾರ್ಥಿ ವೇತನ ವಿತರಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭುಗಳು ವಹಿಸಲಿರುವರು. ಉದ್ಘಾಟನೆಯನ್ನು ಬೆಂಗಳೂರು ರೋಟರಿ ಇಂದಿರಾನಗರದ ಮಾಜಿ ಅಧ್ಯಕ್ಷ ರೋ. ಜಗದೀಶ ಮುಗುಳಿ ಮಾಡಲಿರುವರು. ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ ಇದರ ಅಧ್ಯಕ್ಷ ಶ್ರೀಧರ ಪಡ್ವೆಟ್ನಾಯ, ರೋಟರಿ ಜಿಲ್ಲೆ 3181 ಇದರ ಮುಂದಿನ ವರ್ಷದ ಜಿಲ್ಲಾಧ್ಯಕ್ಷ ರೊ. ಸತೀಶ್ ಬೋಳಾರರು ಮುಖ್ಯ ಅತಿಥಿಗಳಾಗಿಯೂ, ಉಜಿರೆ ಸಂಧ್ಯಾ ಫ್ರೆಶ್ ಮಾಲಕ ರಾಜೇಶ ಪೈ, ಅಸಿಸ್ಟೆಂಟ್ ಗವರ್ನರ್ ರೊ. ಡಾ ಎ.ಜಯಕುಮಾರ ಶೆಟ್ಟಿ, ವಲಯ ಸೇನಾನಿ ರೊ. ಸುರೇಶ ಸಾಲಿಯಾನ್, ರೋಟರಿ ಸೇವಾ ಟ್ರಸ್ಟ್ ಅಧ್ಯಕ್ಷ ರೋ. ಶ್ರೀಕಾಂತ ಕಾಮತ್, ಸ್ಕಾಲರ್ ಶಿಪ್ ಸಮಿತಿಯ ಚೆಯರ್ ಮ್ಯಾನ್ ರೊ. ಅಬೂಬಕ್ಕರ್ ಯು.ಎಚ್ ಇವರು ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ತಮ್ಮ ಪ್ರಕಟಣೆಯಲ್ಲಿ ಪ್ರೊ. ಪ್ರಕಾಶ ಪ್ರಭು ತಿಳಿಸಿದ್ದಾರೆ.

Related posts

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!