July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಬೆಂಗಳೂರು ರೋಟರಿ ಇಂದಿರಾ ನಗರ ಸಹಭಾಗಿತ್ವದಲ್ಲಿ ರೂ. 10,80,000/- ವಿದ್ಯಾರ್ಥಿ ವೇತನವನ್ನು, ಬೆಳ್ತಂಗಡಿ ತಾಲೂಕಿನ 270 ಅರ್ಹ ಪಿಯು ವಿದ್ಯಾರ್ಥಿಗಳಿಗೆ ತಲಾ ರೂ 4000/-ದಂತೆ ನೀಡಲಿದೆ.

ಈ 10,80,000/- ಮೊತ್ತದಲ್ಲಿ, ಬೆಂಗಳೂರು ರೋಟರೀ ಇಂದಿರಾ ನಗರದ ಕೊಡುಗೆ 8,10,000/-, ರೋಟರೀ ಕ್ಲಬ್ ಬೆಳ್ತಂಗಡಿ ಕೊಡುಗೆ 1,70,000/-, ಮತ್ತು ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ (ರಿ) ಕೊಡುಗೆ ರೂ. ಒಂದು ಲಕ್ಷ ಇರಲಿದೆ.


ನ.25 ರಂದು ರೋಟರೀ ಭವನದಲ್ಲಿ ನಡೆಯಲಿರುವ ವಿದ್ಯಾರ್ಥಿ ವೇತನ ವಿತರಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭುಗಳು ವಹಿಸಲಿರುವರು. ಉದ್ಘಾಟನೆಯನ್ನು ಬೆಂಗಳೂರು ರೋಟರಿ ಇಂದಿರಾನಗರದ ಮಾಜಿ ಅಧ್ಯಕ್ಷ ರೋ. ಜಗದೀಶ ಮುಗುಳಿ ಮಾಡಲಿರುವರು. ಕೃಷ್ಣ ಪಡ್ವೆಟ್ನಾಯ ಪ್ರತಿಷ್ಠಾನ ಇದರ ಅಧ್ಯಕ್ಷ ಶ್ರೀಧರ ಪಡ್ವೆಟ್ನಾಯ, ರೋಟರಿ ಜಿಲ್ಲೆ 3181 ಇದರ ಮುಂದಿನ ವರ್ಷದ ಜಿಲ್ಲಾಧ್ಯಕ್ಷ ರೊ. ಸತೀಶ್ ಬೋಳಾರರು ಮುಖ್ಯ ಅತಿಥಿಗಳಾಗಿಯೂ, ಉಜಿರೆ ಸಂಧ್ಯಾ ಫ್ರೆಶ್ ಮಾಲಕ ರಾಜೇಶ ಪೈ, ಅಸಿಸ್ಟೆಂಟ್ ಗವರ್ನರ್ ರೊ. ಡಾ ಎ.ಜಯಕುಮಾರ ಶೆಟ್ಟಿ, ವಲಯ ಸೇನಾನಿ ರೊ. ಸುರೇಶ ಸಾಲಿಯಾನ್, ರೋಟರಿ ಸೇವಾ ಟ್ರಸ್ಟ್ ಅಧ್ಯಕ್ಷ ರೋ. ಶ್ರೀಕಾಂತ ಕಾಮತ್, ಸ್ಕಾಲರ್ ಶಿಪ್ ಸಮಿತಿಯ ಚೆಯರ್ ಮ್ಯಾನ್ ರೊ. ಅಬೂಬಕ್ಕರ್ ಯು.ಎಚ್ ಇವರು ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ತಮ್ಮ ಪ್ರಕಟಣೆಯಲ್ಲಿ ಪ್ರೊ. ಪ್ರಕಾಶ ಪ್ರಭು ತಿಳಿಸಿದ್ದಾರೆ.

Related posts

ನೀಟ್ ಪ್ರತಿಭಟನೆಕಾರರ ಮೇಲಿನ ಹಲ್ಲೆ ಖಂಡನೀಯ : ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

Suddi Udaya

ಬೆನ್ನುಹುರಿಯ ದ್ರವ ತುಂಬಿದ ಚೀಲಗಳ ಎಂಡೋಸ್ಕೋಪಿಕ್ ಸರ್ಜರಿ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮತ್ತೊಂದು ಅಪರೂಪದ ಶಸ್ತ್ರಚಿಕಿತ್ಸೆ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya
error: Content is protected !!