37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಅಂಗವಾಗಿ ಇಲ್ಲಿನ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯುವ ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಕನಾ೯ಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ ಪಾಟೀಲ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠಂ ಹರಿಹರಪುರಂನ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ವಹಿಸಿದ್ದರು. ಉಪನ್ಯಾಸಕರಾದ ರಾಷ್ಟ್ರೀಯ ಚಿಂತಕ ತನ್ವೀರ್ ಅಹಮದ್ ಬೆಂಗಳೂರು ಹಾಗೂ ಪ್ರಜಾವಾಣಿ ಉಪ ಸಂಪಾದಕ ಸೂರ್ಯಪ್ರಕಾಶ ಪಂಡಿತ್ , ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ,ಡಿ.ಸುರೇಂದ್ರ ಕುಮಾರ್, ಡಿ.ಹಷೇಂದ್ರ ಕುಮಾರ್, ಶ್ರೀಮತಿ ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತೃ ಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಕೃತಿ ‘ಮಗಳಿಗೊಂದು ಪತ್ರ’ ಹಾಗೂ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಕೃತಿ ‘ಧಮ೯ದಶ೯ನ’ ಪುಸ್ತಕವನ್ನು ಅನಾವರಣ ಗೊಳಿಸಲಾಯಿತು.ಸುನೀಲ್ ಪಂಡಿತ್ ಹಾಗೂ ಶ್ರದ್ಧಾ ಅಮಿತ್ ಸನ್ಮಾನಿತರ ಪುತ್ರ ‌ವಾಚಿಸಿದರು. ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಡಾ. ಹೆಗ್ಗಡೆಯವರು ಸ್ವಾಗತಿಸಿದರು. ಎಸ್ ಡಿ ಎಂ ಪ್ರಾಧ್ಯಾಪಕ ಡಾ.ಶ್ರೀಧರ ಭಟ್ ಸ್ವಾಗತಿಸಿದರು.

Related posts

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya
error: Content is protected !!