32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ನ. 17 ರಂದು ಮಕ್ಕಳ ದಿನಾಚರಣೆಯನ್ನು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾಯಿತು. ಸಹಶಿಕ್ಷಕಿಯಾದ ಶ್ರೀಮತಿ ಮಲ್ಲಿಕಾರವರು ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಡು, ನೃತ್ಯ, ನಾಟಕದ ಮೂಲಕ ಮಕ್ಕಳನ್ನು ಮನರಂಜಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸೈಂಟ್ ಸೆಬ್ಯಾಸ್ಟಿಯನ್ ಚರ್ಚ್ ಗರ್ಡಾಡಿಯ ಧರ್ಮ ಗುರುಗಳಾದ ವಂ|ಸ್ವಾ| ಮ್ಯಾಕ್ಸಿಮ್ ಪೀಟರ್ ಪಿಂಟೋ ರವರು ಆಗಮಿಸಿದ್ದರು ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಹೆತ್ತವರನ್ನು ಮತ್ತು ಶಿಕ್ಷಕರನ್ನು ಗೌರವಿಸಬೇಕು ಎಂದು ಹೇಳಿ ಮಕ್ಕಳ ದಿನಾಚರಣೆಯ ಶುಭಾಶಯಗಳು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸರವರು, ಸೇಕ್ರೆಡ್ ಹಾರ್ಟ್ ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ, ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಚೇತನ, ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷ ರವೀಂದ್ರ ರೈ , ಮರಿಯ ಕೃಪ ಕಾನ್ವೆಂಟಿನಾ ನಿರ್ದೇಶಕಿಯಾದ ಸಿ|ಹಿಲ್ಡಾ ಮಸ್ಕರೇನಸ್ , ಹಾಗೂ ಶಿಕ್ಷಕರ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕ ವೃಂದದವರು ನಿರೂಪಿಸಿ, ಶ್ರೀಮತಿ ಸ್ಟೆಲ್ಲಾ ಸ್ವಾಗತಿಸಿ, ಶ್ರೀಮತಿ ಅನಿತಾ ಡೇಸ ಧನ್ಯವಾದವನ್ನು ಸಮರ್ಪಿಸಿದರು.

Related posts

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!