23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

ಕಕ್ಯಪದವು: ಉಳಿ ಗ್ರಾಮ ಪಂಚಾಯತ್ ಕಕ್ಯಪದವು ಹಾಗೂ ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ನ.19 ರಂದು “ಸ್ವಚ್ಚತಾ ಅಭಿಯಾನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

“ಸ್ವಚ್ಛತೆ ಕೇವಲ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ; ಜನರು ಮತ್ತು ಯುವಕರು ಸೇರಿಕೊಂಡಾಗ ಮಾತ್ರ ಶಾಶ್ವತ ಬದಲಾವಣೆ ಸಾಧ್ಯ” ಎಂಬ ನಿಟ್ಟಿನಲ್ಲಿ, ಎಲ್‌.ಸಿ.ಆರ್. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಉಳಿ ಗ್ರಾಮ ಪಂಚಾಯತ್‌ನ ಸುತ್ತಮುತ್ತಲಿನ ಪ್ರದೇಶದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು. ಸಾರ್ವಜನಿಕ ರಸ್ತೆ, ಪಂಚಾಯತ್ ಪರಿಸರ, ಸಾರ್ವಜನಿಕ ಸ್ಥಳಗಳು ಹಾಗೂ ಗ್ರಾಮ ಪ್ರದೇಶಗಳಲ್ಲಿರುವ ಕಸ-ತ್ಯಾಜ್ಯಗಳನ್ನು ವಿಂಗಡಿಸಿ ಸ್ವಚ್ಛಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ಉಳಿ ಗ್ರಾಮಪಂಚಾಯತಿನ ಪಿಡಿಓ ವಿದ್ಯಾಶ್ರೀ, ಪಂಚಾಯತಿನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ ಜಿ. ನಾಯಕ್, ಬೋಧಕ ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಅಭಿಯಾನವನ್ನು ಯಶಸ್ವಿಯಾಗಿ ಸಂಪನ್ನಗೊಳಿಸಿದರು. ಅಂತಿಮವಾಗಿ ಉಳಿ ಗ್ರಾಮಪಂಚಾಯತಿನ ಕಾರ್ಯದರ್ಶಿ ಯಶೋಧರ ಧನ್ಯವಾದಗಳನ್ನು ಸಲ್ಲಿಸಿದರು.

Related posts

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya
error: Content is protected !!