ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

ಕಕ್ಯಪದವು: ಉಳಿ ಗ್ರಾಮ ಪಂಚಾಯತ್ ಕಕ್ಯಪದವು ಹಾಗೂ ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ನ.19 ರಂದು “ಸ್ವಚ್ಚತಾ ಅಭಿಯಾನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

“ಸ್ವಚ್ಛತೆ ಕೇವಲ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ; ಜನರು ಮತ್ತು ಯುವಕರು ಸೇರಿಕೊಂಡಾಗ ಮಾತ್ರ ಶಾಶ್ವತ ಬದಲಾವಣೆ ಸಾಧ್ಯ” ಎಂಬ ನಿಟ್ಟಿನಲ್ಲಿ, ಎಲ್‌.ಸಿ.ಆರ್. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಉಳಿ ಗ್ರಾಮ ಪಂಚಾಯತ್‌ನ ಸುತ್ತಮುತ್ತಲಿನ ಪ್ರದೇಶದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು. ಸಾರ್ವಜನಿಕ ರಸ್ತೆ, ಪಂಚಾಯತ್ ಪರಿಸರ, ಸಾರ್ವಜನಿಕ ಸ್ಥಳಗಳು ಹಾಗೂ ಗ್ರಾಮ ಪ್ರದೇಶಗಳಲ್ಲಿರುವ ಕಸ-ತ್ಯಾಜ್ಯಗಳನ್ನು ವಿಂಗಡಿಸಿ ಸ್ವಚ್ಛಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ಉಳಿ ಗ್ರಾಮಪಂಚಾಯತಿನ ಪಿಡಿಓ ವಿದ್ಯಾಶ್ರೀ, ಪಂಚಾಯತಿನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ ಜಿ. ನಾಯಕ್, ಬೋಧಕ ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಅಭಿಯಾನವನ್ನು ಯಶಸ್ವಿಯಾಗಿ ಸಂಪನ್ನಗೊಳಿಸಿದರು. ಅಂತಿಮವಾಗಿ ಉಳಿ ಗ್ರಾಮಪಂಚಾಯತಿನ ಕಾರ್ಯದರ್ಶಿ ಯಶೋಧರ ಧನ್ಯವಾದಗಳನ್ನು ಸಲ್ಲಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ 212 ಫಲಾಭನುವಿಗಳಿಗೆ ವಿದ್ಯುತ್ ಚಾಲಿತ: ಹೊಲಿಗೆ ಯಂತ್ರ ಹಾಗೂ ಉಪಕರಣಗಳ ವಿತರಣೆ

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya
error: Content is protected !!