March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬೆಳ್ತಂಗಡಿ. ವರ್ಕಳದ ಶಿವಗಿರಿ ಮಠ ಹಾಗೂ ಮಂಗಳೂರು ನಾರಾಯಣ ಗುರು ಅಧ್ಯಯನ ಪೀಠದ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಹಾಗೂ ನಾರಾಯಣ ಗುರುಗಳ ಮಹಾನಿರ್ವಾಣ ಶತಮಾನೋತ್ಸವ ಕಾರ್ಯಕ್ರಮವು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪಸ್ಥಿತಿಯಲ್ಲಿ ಡಿ.3ರಂದು ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ವಿವಿಧ ಸಮುದಾಯದಗಳ ಮುಖಂಡರುಗಳ ಕೂಡುವಿಕೆಯೊಂದಿಗೆ ಪೂರ್ವಭಾವಿ ಸಭೆಯು ಬೆಳ್ತಂಗಡಿ ನಾರಾಯಣಗುರು ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳು ಹಾಗೂ ಶಿವಗಿರಿ ಮಠದ ಜ್ಞಾನತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಿದರು.

ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕಾರ್ಯಕ್ರಮದ ಸಂಚಾಲಕರು ರಕ್ಷಿತ್ ಶಿವರಾಂ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿ ತಾಲೂಕಿನಿಂದ ಅತೀ ಹೆಚ್ಚು ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕೆಂದರು. ಈ ಸಂದರ್ಭದಲ್ಲಿ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್, ಗೆಜ್ಜೆ ಗಿರಿ ಕ್ಷೇತ್ರದ ಗೌರವ ಅಧ್ಯಕ್ಷರಾದ ಪಿತಾಂಬರ ಹೆರಾಜೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಶ ಗಬ್ಬಲಡ್ಕ,, ಪ್ರಮುಖರಾದ ಜಯರಾಮ್ ಶೆಟ್ಟಿ ವೇಣೂರು, ಜಯವೀಕ್ರಮ ಕಲ್ಲಾಪು, ಪಿ ಟಿ ಸೆಬಾಸ್ಟಿಯನ್, ಸಂತೋಷ್ ಕುಮಾರ್, ಮೋಹನ್ ಗೌಡ ಕಲ್ಮಂಜ, ನೇಮಿರಾಜ್ ಕಿಲ್ಲೂರು, ಆಯುಬ್ ಡಿ.ಕೆ, ಬೇಬಿ ಸುವರ್ಣ ಮಾಲಾಡಿ, ಬಿ.ಕೆ. ವಸಂತ್ ಪ್ರವೀಣ್ ಹಳ್ಳಿ ಮನೆ, ವೀರೇಂದ್ರ ಕುಮಾರ್ ಜೈನ್, ದಿನೇಶ್ ಮೂಲ್ಯ ಕೊಂಡೆ ಮಾರ್, ದಯಾನಂದ ದೇವಾಡಿಗ ಮೇಣೂರು, ಶ್ರೀಮತಿ ಶೋಭಾ ನಾರಾಯಣ ಗೌಡ, ಶ್ರೀಮತಿ ಸುಮತಿ ಪ್ರಮೋದ್, ನಮಿತಾ ಕೆ ಪೂಜಾರಿ, ಶ್ರೀನಿವಾಸ್ ಕಿಣಿ, ದಿವಾಕರ ಭಂಡಾರಿ, ಸತೀಶ್ ಹೆಗ್ಡೆ, ನಿತೀಶ್ ಕೋಟ್ಯಾನ್ ಎಂ. ಕೆ ಪ್ರಸಾದ್ , ಹಾಗೂ ವಿವಿಧ ದೇವಸ್ಥಾನಗಳ, ಸಮುದಾಯಗಳ ಮತ್ತು ಪಕ್ಷಗಳ ಅಧ್ಯಕ್ಷರು ಸದಸ್ಯರು, ಉಪಸ್ಥಿತರಿದ್ದರು.

Related posts

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya
error: Content is protected !!