25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

ಬೆಳ್ತಂಗಡಿ: ಚಾರಣಪ್ರಿಯರಿಗೆ ನ.20ರಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಹಲವು ತಿಂಗಳಿನಿಂದ ಕಾಡ್ಗಿಚ್ಚು ಭಯ, ಮಳೆಗಾಲ ಇತ್ಯಾದಿ ಕಾರಣಗಳಿಂದ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿತ್ತು. ಪ್ರಸ್ತುತ ಮಳೆ ಕಡಿಮೆಯಾಗಿದ್ದು, ಇದೀಗ ಮತ್ತೆ ಅವಕಾಶ ಕಲ್ಪಿಸಲಾಗಿದೆ.

ನೂರಾರು ಅಡಿ ಎತ್ತರದಿಂದ ನೀರು ಬಂಡಾಜೆ ಜಲಪಾತ ಧುಮ್ಮಿಕ್ಕುವ ಪ್ರದೇಶಕ್ಕೆ ಬೆಳ್ತಂಗಡಿ ತಾಲೂಕಿನ ಕಡಿರು ದ್ಯಾವರದಿಂದ ಚಾರಣದ ಮೂಲಕ ತಲುಪಬಹುದು. ಕುದುರೆಮುಖ ರಾಷ್ಟ್ರೀಯ ಉದ್ಯಾನ ವನದ ವ್ಯಾಪ್ತಿ ಯಲ್ಲಿರುವ ಈ ಜಲಪಾತಕ್ಕೆ ಹೋಗ ಬೇಕಾದರೆ 11 ಕಿ.ಮೀ. ದೂರವನ್ನು ಚಾರಣದ ಮೂಲಕವೇ ತಲುಪಬೇಕು.

ಕಡಿರುದ್ಯಾವರದಿಂದ ಕಡಿದಾದ ಹಾದಿ, ಜಾರುವ ಬಂಡೆಗಳು, ಅರಣ್ಯ ಪ್ರದೇಶ, ಸುತ್ತಲೂ ಬೆಳೆದಿರುವ ಮುಳಿ ಹುಲ್ಲು ಪೊದೆಗಳು ಅಲ್ಲಲ್ಲಿ ಹರಿಯುವ ನೀರು, ಇಂಬಳಗಳ ಕಾಟದೊಂದಿಗೆ ಚಾರಣ ನಡೆಸಿ ಆಕರ್ಷಕವಾದ ಬಂಡಾಜೆ ಜಲಪಾತವನ್ನು ತಲುಪಬಹುದು.

ರಮಣೀಯವಾದ ಈ ಜಲಪಾತ ವೀಕ್ಷಣೆಗೆ ತೆರಳುವ ವೇಳೆ ಕಾಡಾನೆ ಸಹಿತ ಇತರ ವನ್ಯಜೀವಿಗಳು ಎದುರಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಅತಿ ಅಗತ್ಯ, ಜಲಪಾತಕ್ಕೆ ತೆರಳುವ ದಾರಿಯ ಮಾಹಿತಿ ಇರುವ ಸ್ಥಳೀಯರು ಜತೆಗಿದ್ದರೆ ತಲುಪುವುದು ಸುಲಭ, ಚಾರಣದ ವೇಳೆ ಒಂದಿಷ್ಟು ದಾರಿ ತಪ್ಪಿದರೂ ಯಾವುದೇ ಮೊಬೈಲ್ ನೆಟ್ವಕ್ ೯ ಇಲ್ಲದ ಈ ಪರಿಸರದಲ್ಲಿ ಅಲೆಯ ಬೇಕಾಗಬಹುದು. ಈ ಹಿಂದೆ ಇಂತಹ ಹಲವಾರು ಪ್ರಕರಣಗಳು ನಡೆದಿವೆ.

ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಲ್ಲಿರುವ ಈ ಜಲಪಾತಕ್ಕೆ ಕೊಟ್ಟಿಗೆಹಾರದ ಮೂಲಕವೂ ಹೋಗಬಹುದು. ಈ ಭಾಗದಿಂದ ಯಾವುದೇ ಪ್ರವೇಶ ನಿಷೇಧ ಇರಲಿಲ್ಲವಾದ ಕಾರಣ ಇಲ್ಲಿಗೆ ಸಾಕಷ್ಟು ಮಂದಿ ಬರುತ್ತಿದ್ದಾರೆ. ಆದರೆ ಕಡಿರು ದ್ಯಾವರದ ಮೂಲಕ ಚಾರಣ ನಡೆಸಿ ಜಲಪಾತ ವೀಕ್ಷಿಸುವ ಆನಂದ ಇಲ್ಲಿ ಸಿಗುವುದು ಕಡಿಮೆ.

Related posts

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
error: Content is protected !!