September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

ಬೆಳ್ತಂಗಡಿ: ಚಾರಣಪ್ರಿಯರಿಗೆ ನ.20ರಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಹಲವು ತಿಂಗಳಿನಿಂದ ಕಾಡ್ಗಿಚ್ಚು ಭಯ, ಮಳೆಗಾಲ ಇತ್ಯಾದಿ ಕಾರಣಗಳಿಂದ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿತ್ತು. ಪ್ರಸ್ತುತ ಮಳೆ ಕಡಿಮೆಯಾಗಿದ್ದು, ಇದೀಗ ಮತ್ತೆ ಅವಕಾಶ ಕಲ್ಪಿಸಲಾಗಿದೆ.

ನೂರಾರು ಅಡಿ ಎತ್ತರದಿಂದ ನೀರು ಬಂಡಾಜೆ ಜಲಪಾತ ಧುಮ್ಮಿಕ್ಕುವ ಪ್ರದೇಶಕ್ಕೆ ಬೆಳ್ತಂಗಡಿ ತಾಲೂಕಿನ ಕಡಿರು ದ್ಯಾವರದಿಂದ ಚಾರಣದ ಮೂಲಕ ತಲುಪಬಹುದು. ಕುದುರೆಮುಖ ರಾಷ್ಟ್ರೀಯ ಉದ್ಯಾನ ವನದ ವ್ಯಾಪ್ತಿ ಯಲ್ಲಿರುವ ಈ ಜಲಪಾತಕ್ಕೆ ಹೋಗ ಬೇಕಾದರೆ 11 ಕಿ.ಮೀ. ದೂರವನ್ನು ಚಾರಣದ ಮೂಲಕವೇ ತಲುಪಬೇಕು.

ಕಡಿರುದ್ಯಾವರದಿಂದ ಕಡಿದಾದ ಹಾದಿ, ಜಾರುವ ಬಂಡೆಗಳು, ಅರಣ್ಯ ಪ್ರದೇಶ, ಸುತ್ತಲೂ ಬೆಳೆದಿರುವ ಮುಳಿ ಹುಲ್ಲು ಪೊದೆಗಳು ಅಲ್ಲಲ್ಲಿ ಹರಿಯುವ ನೀರು, ಇಂಬಳಗಳ ಕಾಟದೊಂದಿಗೆ ಚಾರಣ ನಡೆಸಿ ಆಕರ್ಷಕವಾದ ಬಂಡಾಜೆ ಜಲಪಾತವನ್ನು ತಲುಪಬಹುದು.

ರಮಣೀಯವಾದ ಈ ಜಲಪಾತ ವೀಕ್ಷಣೆಗೆ ತೆರಳುವ ವೇಳೆ ಕಾಡಾನೆ ಸಹಿತ ಇತರ ವನ್ಯಜೀವಿಗಳು ಎದುರಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಅತಿ ಅಗತ್ಯ, ಜಲಪಾತಕ್ಕೆ ತೆರಳುವ ದಾರಿಯ ಮಾಹಿತಿ ಇರುವ ಸ್ಥಳೀಯರು ಜತೆಗಿದ್ದರೆ ತಲುಪುವುದು ಸುಲಭ, ಚಾರಣದ ವೇಳೆ ಒಂದಿಷ್ಟು ದಾರಿ ತಪ್ಪಿದರೂ ಯಾವುದೇ ಮೊಬೈಲ್ ನೆಟ್ವಕ್ ೯ ಇಲ್ಲದ ಈ ಪರಿಸರದಲ್ಲಿ ಅಲೆಯ ಬೇಕಾಗಬಹುದು. ಈ ಹಿಂದೆ ಇಂತಹ ಹಲವಾರು ಪ್ರಕರಣಗಳು ನಡೆದಿವೆ.

ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಲ್ಲಿರುವ ಈ ಜಲಪಾತಕ್ಕೆ ಕೊಟ್ಟಿಗೆಹಾರದ ಮೂಲಕವೂ ಹೋಗಬಹುದು. ಈ ಭಾಗದಿಂದ ಯಾವುದೇ ಪ್ರವೇಶ ನಿಷೇಧ ಇರಲಿಲ್ಲವಾದ ಕಾರಣ ಇಲ್ಲಿಗೆ ಸಾಕಷ್ಟು ಮಂದಿ ಬರುತ್ತಿದ್ದಾರೆ. ಆದರೆ ಕಡಿರು ದ್ಯಾವರದ ಮೂಲಕ ಚಾರಣ ನಡೆಸಿ ಜಲಪಾತ ವೀಕ್ಷಿಸುವ ಆನಂದ ಇಲ್ಲಿ ಸಿಗುವುದು ಕಡಿಮೆ.

Related posts

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ಧೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆ ಉದ್ಘಾಟನೆ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya
error: Content is protected !!