July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

ಬೆಳ್ತಂಗಡಿ: ಚಾರಣಪ್ರಿಯರಿಗೆ ನ.20ರಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಹಲವು ತಿಂಗಳಿನಿಂದ ಕಾಡ್ಗಿಚ್ಚು ಭಯ, ಮಳೆಗಾಲ ಇತ್ಯಾದಿ ಕಾರಣಗಳಿಂದ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿತ್ತು. ಪ್ರಸ್ತುತ ಮಳೆ ಕಡಿಮೆಯಾಗಿದ್ದು, ಇದೀಗ ಮತ್ತೆ ಅವಕಾಶ ಕಲ್ಪಿಸಲಾಗಿದೆ.

ನೂರಾರು ಅಡಿ ಎತ್ತರದಿಂದ ನೀರು ಬಂಡಾಜೆ ಜಲಪಾತ ಧುಮ್ಮಿಕ್ಕುವ ಪ್ರದೇಶಕ್ಕೆ ಬೆಳ್ತಂಗಡಿ ತಾಲೂಕಿನ ಕಡಿರು ದ್ಯಾವರದಿಂದ ಚಾರಣದ ಮೂಲಕ ತಲುಪಬಹುದು. ಕುದುರೆಮುಖ ರಾಷ್ಟ್ರೀಯ ಉದ್ಯಾನ ವನದ ವ್ಯಾಪ್ತಿ ಯಲ್ಲಿರುವ ಈ ಜಲಪಾತಕ್ಕೆ ಹೋಗ ಬೇಕಾದರೆ 11 ಕಿ.ಮೀ. ದೂರವನ್ನು ಚಾರಣದ ಮೂಲಕವೇ ತಲುಪಬೇಕು.

ಕಡಿರುದ್ಯಾವರದಿಂದ ಕಡಿದಾದ ಹಾದಿ, ಜಾರುವ ಬಂಡೆಗಳು, ಅರಣ್ಯ ಪ್ರದೇಶ, ಸುತ್ತಲೂ ಬೆಳೆದಿರುವ ಮುಳಿ ಹುಲ್ಲು ಪೊದೆಗಳು ಅಲ್ಲಲ್ಲಿ ಹರಿಯುವ ನೀರು, ಇಂಬಳಗಳ ಕಾಟದೊಂದಿಗೆ ಚಾರಣ ನಡೆಸಿ ಆಕರ್ಷಕವಾದ ಬಂಡಾಜೆ ಜಲಪಾತವನ್ನು ತಲುಪಬಹುದು.

ರಮಣೀಯವಾದ ಈ ಜಲಪಾತ ವೀಕ್ಷಣೆಗೆ ತೆರಳುವ ವೇಳೆ ಕಾಡಾನೆ ಸಹಿತ ಇತರ ವನ್ಯಜೀವಿಗಳು ಎದುರಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಅತಿ ಅಗತ್ಯ, ಜಲಪಾತಕ್ಕೆ ತೆರಳುವ ದಾರಿಯ ಮಾಹಿತಿ ಇರುವ ಸ್ಥಳೀಯರು ಜತೆಗಿದ್ದರೆ ತಲುಪುವುದು ಸುಲಭ, ಚಾರಣದ ವೇಳೆ ಒಂದಿಷ್ಟು ದಾರಿ ತಪ್ಪಿದರೂ ಯಾವುದೇ ಮೊಬೈಲ್ ನೆಟ್ವಕ್ ೯ ಇಲ್ಲದ ಈ ಪರಿಸರದಲ್ಲಿ ಅಲೆಯ ಬೇಕಾಗಬಹುದು. ಈ ಹಿಂದೆ ಇಂತಹ ಹಲವಾರು ಪ್ರಕರಣಗಳು ನಡೆದಿವೆ.

ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಲ್ಲಿರುವ ಈ ಜಲಪಾತಕ್ಕೆ ಕೊಟ್ಟಿಗೆಹಾರದ ಮೂಲಕವೂ ಹೋಗಬಹುದು. ಈ ಭಾಗದಿಂದ ಯಾವುದೇ ಪ್ರವೇಶ ನಿಷೇಧ ಇರಲಿಲ್ಲವಾದ ಕಾರಣ ಇಲ್ಲಿಗೆ ಸಾಕಷ್ಟು ಮಂದಿ ಬರುತ್ತಿದ್ದಾರೆ. ಆದರೆ ಕಡಿರು ದ್ಯಾವರದ ಮೂಲಕ ಚಾರಣ ನಡೆಸಿ ಜಲಪಾತ ವೀಕ್ಷಿಸುವ ಆನಂದ ಇಲ್ಲಿ ಸಿಗುವುದು ಕಡಿಮೆ.

Related posts

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಪಡೆದ ಚಿನ್ಮಯ್ ರವರಿಗೆ ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದ ವತಿಯಿಂದ ಗೌರವ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
error: Content is protected !!