September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

ಬೆಳ್ತಂಗಡಿ: ವೆನ್ಲಾಕ್ ರಕ್ಷಾ ಸಮಿತಿಯ ಸಭೆಯು ವೈದ್ಯಕೀಯ ಅಧೀಕ್ಷಕರ ಕಛೇರಿಯಲ್ಲಿ ನ.18 ರಂದು ನಡೆಯಿತು. ಈ ಸಭೆಯಲ್ಲಿ ರಕ್ಷಾ ಸಮಿತಿಗೆ ಬೆಳ್ತಂಗಡಿ ತಾಲೂಕಿನಿಂದ ನಾಮನಿರ್ದೇಶಿತರಾಗಿರುವ ಕಳಿಯ ಗ್ರಾ.ಪಂ ಸದಸ್ಯ ಅಬ್ದುಲ್ ಕರೀಂ ಗೇರುಕಟ್ಟೆ ಮತ್ತು ತಾ.ಪಂ ಮಾಜಿ ಸದಸ್ಯ ಜಯರಾಮ ಭಾಗಿಯಾದರು.

ಸಭೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಯ ಸಿಬ್ಬಂದಿಗಳು ಜನಸ್ನೇಹಿಯಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಲು ಮತ್ತು ಹೊರ ಜಿಲ್ಲೆಗಳಿಂದ ಅತೀ ಹೆಚ್ಚು ರೋಗಿಗಳು ತುರ್ತು ಚಿಕಿತ್ಸೆಗಾಗಿ ಬರುವುದರಿಂದ ನಮ್ಮ ಜಿಲ್ಲೆಯ ರೋಗಿಗಳಿಗೆ ತುರ್ತು ಐ ಸಿ ಯು ಲಭ್ಯ ಇಲ್ಲದೇ ಬಡವರು ಖಾಸಗಿ ಆಸ್ಪತ್ರೆಗೆ ಹೋಗುವ ಪರಿಸ್ಥಿತಿ ಬಂದಿದೆ. ಆದ್ದರಿಂದ ಹೆಚ್ಚುವರಿ ಐ ಸಿ ಯು ವ್ಯವಸ್ಥೆ ಮಾಡಲು ಕ್ರಮವಹಿಸುವಂತೆ ಆಗ್ರಹಿಸಿದರು.

ಆಸ್ಪತ್ರೆಯ ಆವರಣದ ಒಳಗೆ ಖಾಸಗಿ ಆಂಬುಲೆನ್ಸ್ ಗಳ ನಿಲುಗಡೆಗೆ ಕಡಿವಾಣ ಹಾಕುವಂತೆ ತಿಳಿಸಿದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಿವಪ್ರಕಾಶ್ ಡಿ.ಎಸ್., ಸಮಿತಿಯ ಇತರ ಸದಸ್ಯರಾದ ಪದ್ಮನಾಭ ಅಮೀನ್, ಶ್ರೀಮತಿ ಪ್ರಮೀಳಾ ಈಶ್ವರ್, ಅನಿಲ್ ರಸ್ಕಿನ್ಹಾ, ಅಬ್ದುಲ್ ಸಲೀಮ್, ಶಶಿಧರ ಬಜಾಲ್, ದಾಮೋದರ ಪುತ್ತೂರು ಹಾಜರಿದ್ದರು.

Related posts

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya
error: Content is protected !!