July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

ಬೆಳ್ತಂಗಡಿ: ವೆನ್ಲಾಕ್ ರಕ್ಷಾ ಸಮಿತಿಯ ಸಭೆಯು ವೈದ್ಯಕೀಯ ಅಧೀಕ್ಷಕರ ಕಛೇರಿಯಲ್ಲಿ ನ.18 ರಂದು ನಡೆಯಿತು. ಈ ಸಭೆಯಲ್ಲಿ ರಕ್ಷಾ ಸಮಿತಿಗೆ ಬೆಳ್ತಂಗಡಿ ತಾಲೂಕಿನಿಂದ ನಾಮನಿರ್ದೇಶಿತರಾಗಿರುವ ಕಳಿಯ ಗ್ರಾ.ಪಂ ಸದಸ್ಯ ಅಬ್ದುಲ್ ಕರೀಂ ಗೇರುಕಟ್ಟೆ ಮತ್ತು ತಾ.ಪಂ ಮಾಜಿ ಸದಸ್ಯ ಜಯರಾಮ ಭಾಗಿಯಾದರು.

ಸಭೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಯ ಸಿಬ್ಬಂದಿಗಳು ಜನಸ್ನೇಹಿಯಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಲು ಮತ್ತು ಹೊರ ಜಿಲ್ಲೆಗಳಿಂದ ಅತೀ ಹೆಚ್ಚು ರೋಗಿಗಳು ತುರ್ತು ಚಿಕಿತ್ಸೆಗಾಗಿ ಬರುವುದರಿಂದ ನಮ್ಮ ಜಿಲ್ಲೆಯ ರೋಗಿಗಳಿಗೆ ತುರ್ತು ಐ ಸಿ ಯು ಲಭ್ಯ ಇಲ್ಲದೇ ಬಡವರು ಖಾಸಗಿ ಆಸ್ಪತ್ರೆಗೆ ಹೋಗುವ ಪರಿಸ್ಥಿತಿ ಬಂದಿದೆ. ಆದ್ದರಿಂದ ಹೆಚ್ಚುವರಿ ಐ ಸಿ ಯು ವ್ಯವಸ್ಥೆ ಮಾಡಲು ಕ್ರಮವಹಿಸುವಂತೆ ಆಗ್ರಹಿಸಿದರು.

ಆಸ್ಪತ್ರೆಯ ಆವರಣದ ಒಳಗೆ ಖಾಸಗಿ ಆಂಬುಲೆನ್ಸ್ ಗಳ ನಿಲುಗಡೆಗೆ ಕಡಿವಾಣ ಹಾಕುವಂತೆ ತಿಳಿಸಿದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಿವಪ್ರಕಾಶ್ ಡಿ.ಎಸ್., ಸಮಿತಿಯ ಇತರ ಸದಸ್ಯರಾದ ಪದ್ಮನಾಭ ಅಮೀನ್, ಶ್ರೀಮತಿ ಪ್ರಮೀಳಾ ಈಶ್ವರ್, ಅನಿಲ್ ರಸ್ಕಿನ್ಹಾ, ಅಬ್ದುಲ್ ಸಲೀಮ್, ಶಶಿಧರ ಬಜಾಲ್, ದಾಮೋದರ ಪುತ್ತೂರು ಹಾಜರಿದ್ದರು.

Related posts

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya

ಊರಿನ ಜನರ ಸುರಕ್ಷತೆಗೆ ಮೊದಲ ಆದ್ಯತೆ” – ಚಿರತೆ ಪ್ರತ್ಯಕ್ಷದ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ ತೆಕ್ಕಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್

Suddi Udaya
error: Content is protected !!