25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗಾಗಿ ಜಿಲ್ಲಾ ಮಟ್ಟದ ಒಂದು ದಿನದ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಗಾರವನ್ನು ನ. 18ರಂದು ಹಮ್ಮಿಕೊಳ್ಳಲಾಯಿತು.

ನಿಕೋನ್ ಕ್ಯಾಮರದ ಡೀಲರ್ ಮಹಾವೀರ ಏಜೆನ್ಸಿ ಮoಗಳೂರು ಇವರ ಸಹಕಾರದೊಂದಿಗೆ ಕoಪನಿಯ ತರಬೇತುದಾರ ಸ್ಟೆರಿನ್‌ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸoದರ್ಭದಲ್ಲಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ಛಾಯಾ ಕಾರ್ಯದರ್ಶಿ ಸoದೇಶ್ ನಿಡ್ಲೆ, ಉಪಸ್ಥಿತರಿದ್ದರು.

ಸ್ಟೆರಿನ್ ರವರು‌ ಕ್ಯಾಮರದ ವಿಶೇಷ ಟೆಕ್ನಾಲಜಿಯ ಬಗ್ಗೆ ತರಬೇತಿ ನೀಡಿದರು. ಅವರೊಂದಿಗೆ ಕoಪನಿಯ ಸೇಲ್ಸ್ ಮೇನೆಜರ್ ಮಹೇಶ್, ಸೇಲ್ಸ್ ಇನ್ ಚಾರ್ಜ್ ಶ್ರೀನಿವಾಸ್, ಟೀಂ ಲೀಡರ್ ರೂಪೇಶ್, ಸಹಕಾರ ನೀಡಿದರು. ಸುಮಾರು 55 ಎಸ್ ಕೆ ಪಿ ಎ ಸದಸ್ಯರು ತರಬೇತಿಯಲ್ಲಿ ಭಾಗವಹಿಸಿದ್ದರು.

Related posts

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya
error: Content is protected !!