July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

ಪುಂಜಾಲಕಟ್ಟೆ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ. 19ರಂದು ಮಧ್ಯಾಹ್ನ ಸಂಭವಿಸಿದೆ.

ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21ವ) ಮೃತಪಟ್ಟವರು. ಸ್ಕೂಟರ್ ನ ಇನ್ನೋರ್ವ ಸವಾರೆ, ಗುರುವಾಯನಕೆರೆ ನಿವಾಸಿ ಪೃಥ್ವಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇಬ್ಬರೂ ಮಂಗಳೂರು ಕಾಲೇಜಿನ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿಯರೆಂದು ತಿಳಿದು ಬಂದಿದೆ.

ಬಂಟ್ವಾಳ- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವಳಕಟ್ಟೆಯಿಂದ ಎನ್.ಸಿ.ರೋಡ್ ಗೆ ಸಾಗುವ ದಾರಿಯಲ್ಲಿ ತಿರುವೊಂದಿದ್ದು, ತೀರಾ ಅಪಾಯಕಾರಿಯಾಗಿದ್ದು ಅನೇಕ ಅಪಘಾತಗಳು ಸಂಭವಿಸಿವೆ.

ಇಬ್ಬರೂ ಬೆಳ್ತಂಗಡಿಯಿಂದ ಕಾಲೇಜಿಗೆ ಹೋಗುವ ವೇಳೆ ಈ ತಿರುವಿನಲ್ಲಿ ವ್ಯಾಗನಾರ್ ಕಾರು ಮತ್ತು ಹೊಂಡಾ ಆಕ್ಟಿವ್ ಮಧ್ಯೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಭೇಟಿ ಮಾಡಿದ ಬೆಳ್ತಂಗಡಿ ಪ.ಪಂ. ಹಾಗೂ ಗ್ರಾ.ಪಂ. ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!