22.6 C
ಪುತ್ತೂರು, ಬೆಳ್ತಂಗಡಿ
July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಇಂಡಸ್ ಟವರ್ಸ್ ಕಾರ್ಮಿಕರ ನ್ಯಾಯಕ್ಕಾಗಿ ಭಾರತೀಯ ಮಜ್ದೂರು ಸಂಘದಿಂದ ದ.ಕ ಜಿಲ್ಲಾ ಸಂಸದರಿಗೆ ಮನವಿ

ಮಂಗಳೂರು: ಇಂಡಸ್ ಟವರ್ಸ್ ಲಿಮಿಟೆಡ್‌ನ ಒಪ್ಪಂದ ಆಧಾರಿತ ಕಂಪನಿಯಲ್ಲಿ ಹಲವು ತಿಂಗಳಿಂದ ವೇತನ, ಬೋನಸ್, ESI–PF ಹಾಗೂ ಇತರ ಕಾನೂನುಬದ್ಧ ಸವಲತ್ತುಗಳಿಂದ ವಂಚಿತರಾಗಿರುವ ಸುಮಾರು 150 ಗಿಂತ ಹೆಚ್ಚು ಕಾರ್ಮಿಕರ ಪರವಾಗಿ, ಭಾರತೀಯ ಮಜ್ದೂರು ಸಂಘ – ದಕ್ಷಿಣ ಕನ್ನಡ ಜಿಲ್ಲೆ ಇಂದು ಸಂಸದರ ಕಚೇರಿಗೆ ಭೇಟಿ ನೀಡಿ ಅವರ ಆಪ್ತ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.

ಕಾರ್ಮಿಕರ ಗಂಭೀರ ಸಮಸ್ಯೆಯನ್ನು ವಿವರಿಸಿದ ಮನವಿಯನ್ನು BMS ಜಿಲ್ಲಾ ಸಮಿತಿಯು ಅಧಿಕೃತವಾಗಿ ಸಲ್ಲಿಸಿದ್ದು, ಕಾರ್ಮಿಕರ ವೇತನ ಬಾಕಿ, ಹಕ್ಕು ಉಲ್ಲಂಘನೆಗಳು ಹಾಗೂ ಕಂಪನಿಯ ಅಪರಾಧ ನಿರ್ಲಕ್ಷ್ಯಗಳ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಮನವಿ ಸ್ವೀಕರಿಸಿದ ಅವರು ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕಾರ್ಮಿಕರ ಹಕ್ಕುಗಳನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸಂಸದರಿಗೆ ಮನವರಿಕೆ ಮಾಡುತ್ತೇವೆ ಎಂದು ತಿಳಿದರು.

BMS ಜಿಲ್ಲಾ ತಂಡದಿಂದ ತಿಳಿಸಿರುವಂತೆ:“ಕಾರ್ಮಿಕರ ನ್ಯಾಯಕ್ಕಾಗಿ ಹೋರಾಡುವುದು ನಮ್ಮ ಸಂಘಟನೆಯ ನೈತಿಕ ಹಾಗೂ ಕಾನೂನುಬದ್ಧ ಕರ್ತವ್ಯ. ಇಂಡಸ್ ಟವರ್ಸ್ ಕಾರ್ಮಿಕರ ಮೇಲೆ ನಡೆಯುತ್ತಿರುವ ಅನ್ಯಾಯವನ್ನು ಯಾವುದೇ ಪರಿಸ್ಥಿತಿಯಲ್ಲೂ ಸಹಿಸಲಿಕ್ಕಾಗದು. ನ್ಯಾಯ ಸಿಗುವವರೆಗೆ ನಾವು ಹೋರಾಟ ಮುಂದುವರಿಸುತ್ತೇವೆ” ಎಂದು ತಿಳಿಸಿದ್ದಾರೆ.

ಮನವಿ ಸಲ್ಲಿಕೆಯಲ್ಲಿ BMS ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು, BMS ರಾಜ್ಯ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ ಉಜಿರೆ, ಜಿಲ್ಲಾ ಪ್ರಮುಖರಾದ ನಾರಾಯಣ ಪೂಜಾರಿ, ನವೀನ್ ಬಂಟ್ವಾಳ, BPTMS ಜಿಲ್ಲಾ ಅಧ್ಯಕ್ಷ ಯಶಪಾಲ್, ಕಾರ್ಯದರ್ಶಿ ಶಿವರಾಮ್ ಮತ್ತು BPTMS ಮಜ್ದೂರು ಸಂಘದ ನಾಯಕರೂ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್‌ ಸವಾರನಿಗೆ ಗಾಯ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya
error: Content is protected !!