37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

ಬೆಳ್ತಂಗಡಿ: ಚಾರಣಪ್ರಿಯರಿಗೆ ನ.20ರಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಹಲವು ತಿಂಗಳಿನಿಂದ ಕಾಡ್ಗಿಚ್ಚು ಭಯ, ಮಳೆಗಾಲ ಇತ್ಯಾದಿ ಕಾರಣಗಳಿಂದ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿತ್ತು. ಪ್ರಸ್ತುತ ಮಳೆ ಕಡಿಮೆಯಾಗಿದ್ದು, ಇದೀಗ ಮತ್ತೆ ಅವಕಾಶ ಕಲ್ಪಿಸಲಾಗಿದೆ.

ನೂರಾರು ಅಡಿ ಎತ್ತರದಿಂದ ನೀರು ಬಂಡಾಜೆ ಜಲಪಾತ ಧುಮ್ಮಿಕ್ಕುವ ಪ್ರದೇಶಕ್ಕೆ ಬೆಳ್ತಂಗಡಿ ತಾಲೂಕಿನ ಕಡಿರು ದ್ಯಾವರದಿಂದ ಚಾರಣದ ಮೂಲಕ ತಲುಪಬಹುದು. ಕುದುರೆಮುಖ ರಾಷ್ಟ್ರೀಯ ಉದ್ಯಾನ ವನದ ವ್ಯಾಪ್ತಿ ಯಲ್ಲಿರುವ ಈ ಜಲಪಾತಕ್ಕೆ ಹೋಗ ಬೇಕಾದರೆ 11 ಕಿ.ಮೀ. ದೂರವನ್ನು ಚಾರಣದ ಮೂಲಕವೇ ತಲುಪಬೇಕು.

ಕಡಿರುದ್ಯಾವರದಿಂದ ಕಡಿದಾದ ಹಾದಿ, ಜಾರುವ ಬಂಡೆಗಳು, ಅರಣ್ಯ ಪ್ರದೇಶ, ಸುತ್ತಲೂ ಬೆಳೆದಿರುವ ಮುಳಿ ಹುಲ್ಲು ಪೊದೆಗಳು ಅಲ್ಲಲ್ಲಿ ಹರಿಯುವ ನೀರು, ಇಂಬಳಗಳ ಕಾಟದೊಂದಿಗೆ ಚಾರಣ ನಡೆಸಿ ಆಕರ್ಷಕವಾದ ಬಂಡಾಜೆ ಜಲಪಾತವನ್ನು ತಲುಪಬಹುದು.

ರಮಣೀಯವಾದ ಈ ಜಲಪಾತ ವೀಕ್ಷಣೆಗೆ ತೆರಳುವ ವೇಳೆ ಕಾಡಾನೆ ಸಹಿತ ಇತರ ವನ್ಯಜೀವಿಗಳು ಎದುರಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಅತಿ ಅಗತ್ಯ, ಜಲಪಾತಕ್ಕೆ ತೆರಳುವ ದಾರಿಯ ಮಾಹಿತಿ ಇರುವ ಸ್ಥಳೀಯರು ಜತೆಗಿದ್ದರೆ ತಲುಪುವುದು ಸುಲಭ, ಚಾರಣದ ವೇಳೆ ಒಂದಿಷ್ಟು ದಾರಿ ತಪ್ಪಿದರೂ ಯಾವುದೇ ಮೊಬೈಲ್ ನೆಟ್ವಕ್ ೯ ಇಲ್ಲದ ಈ ಪರಿಸರದಲ್ಲಿ ಅಲೆಯ ಬೇಕಾಗಬಹುದು. ಈ ಹಿಂದೆ ಇಂತಹ ಹಲವಾರು ಪ್ರಕರಣಗಳು ನಡೆದಿವೆ.

ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಲ್ಲಿರುವ ಈ ಜಲಪಾತಕ್ಕೆ ಕೊಟ್ಟಿಗೆಹಾರದ ಮೂಲಕವೂ ಹೋಗಬಹುದು. ಈ ಭಾಗದಿಂದ ಯಾವುದೇ ಪ್ರವೇಶ ನಿಷೇಧ ಇರಲಿಲ್ಲವಾದ ಕಾರಣ ಇಲ್ಲಿಗೆ ಸಾಕಷ್ಟು ಮಂದಿ ಬರುತ್ತಿದ್ದಾರೆ. ಆದರೆ ಕಡಿರು ದ್ಯಾವರದ ಮೂಲಕ ಚಾರಣ ನಡೆಸಿ ಜಲಪಾತ ವೀಕ್ಷಿಸುವ ಆನಂದ ಇಲ್ಲಿ ಸಿಗುವುದು ಕಡಿಮೆ.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

Suddi Udaya

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya
error: Content is protected !!