September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

ಬೆಳ್ತಂಗಡಿ: ಚಾರಣಪ್ರಿಯರಿಗೆ ನ.20ರಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಹಲವು ತಿಂಗಳಿನಿಂದ ಕಾಡ್ಗಿಚ್ಚು ಭಯ, ಮಳೆಗಾಲ ಇತ್ಯಾದಿ ಕಾರಣಗಳಿಂದ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿತ್ತು. ಪ್ರಸ್ತುತ ಮಳೆ ಕಡಿಮೆಯಾಗಿದ್ದು, ಇದೀಗ ಮತ್ತೆ ಅವಕಾಶ ಕಲ್ಪಿಸಲಾಗಿದೆ.

ನೂರಾರು ಅಡಿ ಎತ್ತರದಿಂದ ನೀರು ಬಂಡಾಜೆ ಜಲಪಾತ ಧುಮ್ಮಿಕ್ಕುವ ಪ್ರದೇಶಕ್ಕೆ ಬೆಳ್ತಂಗಡಿ ತಾಲೂಕಿನ ಕಡಿರು ದ್ಯಾವರದಿಂದ ಚಾರಣದ ಮೂಲಕ ತಲುಪಬಹುದು. ಕುದುರೆಮುಖ ರಾಷ್ಟ್ರೀಯ ಉದ್ಯಾನ ವನದ ವ್ಯಾಪ್ತಿ ಯಲ್ಲಿರುವ ಈ ಜಲಪಾತಕ್ಕೆ ಹೋಗ ಬೇಕಾದರೆ 11 ಕಿ.ಮೀ. ದೂರವನ್ನು ಚಾರಣದ ಮೂಲಕವೇ ತಲುಪಬೇಕು.

ಕಡಿರುದ್ಯಾವರದಿಂದ ಕಡಿದಾದ ಹಾದಿ, ಜಾರುವ ಬಂಡೆಗಳು, ಅರಣ್ಯ ಪ್ರದೇಶ, ಸುತ್ತಲೂ ಬೆಳೆದಿರುವ ಮುಳಿ ಹುಲ್ಲು ಪೊದೆಗಳು ಅಲ್ಲಲ್ಲಿ ಹರಿಯುವ ನೀರು, ಇಂಬಳಗಳ ಕಾಟದೊಂದಿಗೆ ಚಾರಣ ನಡೆಸಿ ಆಕರ್ಷಕವಾದ ಬಂಡಾಜೆ ಜಲಪಾತವನ್ನು ತಲುಪಬಹುದು.

ರಮಣೀಯವಾದ ಈ ಜಲಪಾತ ವೀಕ್ಷಣೆಗೆ ತೆರಳುವ ವೇಳೆ ಕಾಡಾನೆ ಸಹಿತ ಇತರ ವನ್ಯಜೀವಿಗಳು ಎದುರಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಅತಿ ಅಗತ್ಯ, ಜಲಪಾತಕ್ಕೆ ತೆರಳುವ ದಾರಿಯ ಮಾಹಿತಿ ಇರುವ ಸ್ಥಳೀಯರು ಜತೆಗಿದ್ದರೆ ತಲುಪುವುದು ಸುಲಭ, ಚಾರಣದ ವೇಳೆ ಒಂದಿಷ್ಟು ದಾರಿ ತಪ್ಪಿದರೂ ಯಾವುದೇ ಮೊಬೈಲ್ ನೆಟ್ವಕ್ ೯ ಇಲ್ಲದ ಈ ಪರಿಸರದಲ್ಲಿ ಅಲೆಯ ಬೇಕಾಗಬಹುದು. ಈ ಹಿಂದೆ ಇಂತಹ ಹಲವಾರು ಪ್ರಕರಣಗಳು ನಡೆದಿವೆ.

ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಲ್ಲಿರುವ ಈ ಜಲಪಾತಕ್ಕೆ ಕೊಟ್ಟಿಗೆಹಾರದ ಮೂಲಕವೂ ಹೋಗಬಹುದು. ಈ ಭಾಗದಿಂದ ಯಾವುದೇ ಪ್ರವೇಶ ನಿಷೇಧ ಇರಲಿಲ್ಲವಾದ ಕಾರಣ ಇಲ್ಲಿಗೆ ಸಾಕಷ್ಟು ಮಂದಿ ಬರುತ್ತಿದ್ದಾರೆ. ಆದರೆ ಕಡಿರು ದ್ಯಾವರದ ಮೂಲಕ ಚಾರಣ ನಡೆಸಿ ಜಲಪಾತ ವೀಕ್ಷಿಸುವ ಆನಂದ ಇಲ್ಲಿ ಸಿಗುವುದು ಕಡಿಮೆ.

Related posts

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya
error: Content is protected !!