32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

ಉಜಿರೆ: ಅಬ್ದುಲ್ ನಜೀರ್ ಸಾಬ್ ಪಂಚಾಯತ್ ರಾಜ್ ಪೀಠ, ಸಿ.ಎಂ.ಡಿ.ಆರ್ ಸಂಸ್ಥೆ ಧಾರವಾಡ ವತಿಯಿಂದ ಹಮ್ಮಿಕೊಂಡಿರುವ ‘ವಿಕಸಿತ ಭಾರತ @ 2047 ಸಾಧಿಸಲು ಗ್ರಾಮ ಪಂಚಾಯತ್ ಗಳ ಪಾತ್ರ” ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ತಜ್ಞ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲು ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಯವರಿಗೆ ಆಹ್ವಾನ ಬಂದಿರುತ್ತದೆ.


ಸೆಂಟರ್ ಫಾರ್ ಮಲ್ಟಿ-ಡಿಸ್ಸಿಪ್ಲಿನರಿ ಡೆವಲಪ್ಟಂಟ್ ರಿಸರ್ಚ್ ಸಂಸ್ಥೆ ಧಾರವಾಡ, ರಾಷ್ಟ್ರ ಮಟ್ಟದ ಸಂಶೋಧನಾ ಸಂಸ್ಥೆಯಾದ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಕೇಂದ್ರ ನವದೆಹಲಿ ಇದರ ಒಂದು ಅಂಗ ಸಂಸ್ಥೆಯಾಗಿದ್ದು, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಗ್ರಾಮೀಣಾಭಿರುದ್ಧಿ ಮತ್ತು ಪಂಚಾಯತ್ ರಾಜ್, ಕೃಷಿ, ಆರೋಗ್ಯ, ಶಿಕ್ಷಣ ಮತ್ತು ಇನ್ನಿತರ ವಿಷಯಗಳ ಕುರಿತು ಅನೇಕ ಸಂಶೋಧನಾ ಅಧ್ಯಯನ, ವಿಚಾರ ಸಂಕಿರಣ, ಮತ್ತು ತರಬೇತಿ ಕಾರ್ಯಕ್ರಮವನ್ನು ಕೈಗೊಂಡಿರುತ್ತದೆ. ನ. ೨೦, ೨೧ ರಂದು ೨ ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.

ಈ ವಿಚಾರ ಸಂಕಿರಣದಲ್ಲಿ ದೇಶದ ವಿವಿಧ ರಾಜ್ಯಗಳ ಪಂಚಾಯತ್ ರಾಜ್ ತಜ್ಞರು, ಅಧಿಕಾರಿಗಳು, ಎನ್‌ಜಿಓ ಪ್ರತಿನಿಧಿಗಳು ಮತ್ತು ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ, ಗ್ರಾಮ ಪಂಚಾಯತಿಯಲ್ಲಿ ಕೈಗೊಂಡಿರುವ ವಿನೂತನ ಮತ್ತು ಮಾದರಿ ಕಾರ್ಯಕ್ರಮಗಳನ್ನು ಈ ವಿಚಾರ ಸಂಕಿರಣ ತಜ್ಞ ಸಂಪನ್ಮೂಲ ವ್ಯಕ್ತಿಯಾಗಿ ಹಂಚಿಕೊಳ್ಳಲಿದ್ದಾರೆ.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮರುಮೌಲ್ಯಮಾಪನ ಫಲಿತಾಂಶ: ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜು ತಾಲೂಕಿನಲ್ಲಿ ಪ್ರಥಮ

Suddi Udaya

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya
error: Content is protected !!