22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

ಉಜಿರೆ: ಅಬ್ದುಲ್ ನಜೀರ್ ಸಾಬ್ ಪಂಚಾಯತ್ ರಾಜ್ ಪೀಠ, ಸಿ.ಎಂ.ಡಿ.ಆರ್ ಸಂಸ್ಥೆ ಧಾರವಾಡ ವತಿಯಿಂದ ಹಮ್ಮಿಕೊಂಡಿರುವ ‘ವಿಕಸಿತ ಭಾರತ @ 2047 ಸಾಧಿಸಲು ಗ್ರಾಮ ಪಂಚಾಯತ್ ಗಳ ಪಾತ್ರ” ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ತಜ್ಞ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲು ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಯವರಿಗೆ ಆಹ್ವಾನ ಬಂದಿರುತ್ತದೆ.


ಸೆಂಟರ್ ಫಾರ್ ಮಲ್ಟಿ-ಡಿಸ್ಸಿಪ್ಲಿನರಿ ಡೆವಲಪ್ಟಂಟ್ ರಿಸರ್ಚ್ ಸಂಸ್ಥೆ ಧಾರವಾಡ, ರಾಷ್ಟ್ರ ಮಟ್ಟದ ಸಂಶೋಧನಾ ಸಂಸ್ಥೆಯಾದ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಕೇಂದ್ರ ನವದೆಹಲಿ ಇದರ ಒಂದು ಅಂಗ ಸಂಸ್ಥೆಯಾಗಿದ್ದು, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಗ್ರಾಮೀಣಾಭಿರುದ್ಧಿ ಮತ್ತು ಪಂಚಾಯತ್ ರಾಜ್, ಕೃಷಿ, ಆರೋಗ್ಯ, ಶಿಕ್ಷಣ ಮತ್ತು ಇನ್ನಿತರ ವಿಷಯಗಳ ಕುರಿತು ಅನೇಕ ಸಂಶೋಧನಾ ಅಧ್ಯಯನ, ವಿಚಾರ ಸಂಕಿರಣ, ಮತ್ತು ತರಬೇತಿ ಕಾರ್ಯಕ್ರಮವನ್ನು ಕೈಗೊಂಡಿರುತ್ತದೆ. ನ. ೨೦, ೨೧ ರಂದು ೨ ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.

ಈ ವಿಚಾರ ಸಂಕಿರಣದಲ್ಲಿ ದೇಶದ ವಿವಿಧ ರಾಜ್ಯಗಳ ಪಂಚಾಯತ್ ರಾಜ್ ತಜ್ಞರು, ಅಧಿಕಾರಿಗಳು, ಎನ್‌ಜಿಓ ಪ್ರತಿನಿಧಿಗಳು ಮತ್ತು ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ, ಗ್ರಾಮ ಪಂಚಾಯತಿಯಲ್ಲಿ ಕೈಗೊಂಡಿರುವ ವಿನೂತನ ಮತ್ತು ಮಾದರಿ ಕಾರ್ಯಕ್ರಮಗಳನ್ನು ಈ ವಿಚಾರ ಸಂಕಿರಣ ತಜ್ಞ ಸಂಪನ್ಮೂಲ ವ್ಯಕ್ತಿಯಾಗಿ ಹಂಚಿಕೊಳ್ಳಲಿದ್ದಾರೆ.

Related posts

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ: ಕಣ್ಣೂರಿನ ತಂಗಚ್ಚ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!