25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

ಬೆಳ್ತಂಗಡಿ: ವೆನ್ಲಾಕ್ ರಕ್ಷಾ ಸಮಿತಿಯ ಸಭೆಯು ವೈದ್ಯಕೀಯ ಅಧೀಕ್ಷಕರ ಕಛೇರಿಯಲ್ಲಿ ನ.18 ರಂದು ನಡೆಯಿತು. ಈ ಸಭೆಯಲ್ಲಿ ರಕ್ಷಾ ಸಮಿತಿಗೆ ಬೆಳ್ತಂಗಡಿ ತಾಲೂಕಿನಿಂದ ನಾಮನಿರ್ದೇಶಿತರಾಗಿರುವ ಕಳಿಯ ಗ್ರಾ.ಪಂ ಸದಸ್ಯ ಅಬ್ದುಲ್ ಕರೀಂ ಗೇರುಕಟ್ಟೆ ಮತ್ತು ತಾ.ಪಂ ಮಾಜಿ ಸದಸ್ಯ ಜಯರಾಮ ಭಾಗಿಯಾದರು.

ಸಭೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಯ ಸಿಬ್ಬಂದಿಗಳು ಜನಸ್ನೇಹಿಯಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಲು ಮತ್ತು ಹೊರ ಜಿಲ್ಲೆಗಳಿಂದ ಅತೀ ಹೆಚ್ಚು ರೋಗಿಗಳು ತುರ್ತು ಚಿಕಿತ್ಸೆಗಾಗಿ ಬರುವುದರಿಂದ ನಮ್ಮ ಜಿಲ್ಲೆಯ ರೋಗಿಗಳಿಗೆ ತುರ್ತು ಐ ಸಿ ಯು ಲಭ್ಯ ಇಲ್ಲದೇ ಬಡವರು ಖಾಸಗಿ ಆಸ್ಪತ್ರೆಗೆ ಹೋಗುವ ಪರಿಸ್ಥಿತಿ ಬಂದಿದೆ. ಆದ್ದರಿಂದ ಹೆಚ್ಚುವರಿ ಐ ಸಿ ಯು ವ್ಯವಸ್ಥೆ ಮಾಡಲು ಕ್ರಮವಹಿಸುವಂತೆ ಆಗ್ರಹಿಸಿದರು.

ಆಸ್ಪತ್ರೆಯ ಆವರಣದ ಒಳಗೆ ಖಾಸಗಿ ಆಂಬುಲೆನ್ಸ್ ಗಳ ನಿಲುಗಡೆಗೆ ಕಡಿವಾಣ ಹಾಕುವಂತೆ ತಿಳಿಸಿದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಿವಪ್ರಕಾಶ್ ಡಿ.ಎಸ್., ಸಮಿತಿಯ ಇತರ ಸದಸ್ಯರಾದ ಪದ್ಮನಾಭ ಅಮೀನ್, ಶ್ರೀಮತಿ ಪ್ರಮೀಳಾ ಈಶ್ವರ್, ಅನಿಲ್ ರಸ್ಕಿನ್ಹಾ, ಅಬ್ದುಲ್ ಸಲೀಮ್, ಶಶಿಧರ ಬಜಾಲ್, ದಾಮೋದರ ಪುತ್ತೂರು ಹಾಜರಿದ್ದರು.

Related posts

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya
error: Content is protected !!