25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

ಬೆಳ್ತಂಗಡಿ: ವೆನ್ಲಾಕ್ ರಕ್ಷಾ ಸಮಿತಿಯ ಸಭೆಯು ವೈದ್ಯಕೀಯ ಅಧೀಕ್ಷಕರ ಕಛೇರಿಯಲ್ಲಿ ನ.18 ರಂದು ನಡೆಯಿತು. ಈ ಸಭೆಯಲ್ಲಿ ರಕ್ಷಾ ಸಮಿತಿಗೆ ಬೆಳ್ತಂಗಡಿ ತಾಲೂಕಿನಿಂದ ನಾಮನಿರ್ದೇಶಿತರಾಗಿರುವ ಕಳಿಯ ಗ್ರಾ.ಪಂ ಸದಸ್ಯ ಅಬ್ದುಲ್ ಕರೀಂ ಗೇರುಕಟ್ಟೆ ಮತ್ತು ತಾ.ಪಂ ಮಾಜಿ ಸದಸ್ಯ ಜಯರಾಮ ಭಾಗಿಯಾದರು.

ಸಭೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಯ ಸಿಬ್ಬಂದಿಗಳು ಜನಸ್ನೇಹಿಯಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಲು ಮತ್ತು ಹೊರ ಜಿಲ್ಲೆಗಳಿಂದ ಅತೀ ಹೆಚ್ಚು ರೋಗಿಗಳು ತುರ್ತು ಚಿಕಿತ್ಸೆಗಾಗಿ ಬರುವುದರಿಂದ ನಮ್ಮ ಜಿಲ್ಲೆಯ ರೋಗಿಗಳಿಗೆ ತುರ್ತು ಐ ಸಿ ಯು ಲಭ್ಯ ಇಲ್ಲದೇ ಬಡವರು ಖಾಸಗಿ ಆಸ್ಪತ್ರೆಗೆ ಹೋಗುವ ಪರಿಸ್ಥಿತಿ ಬಂದಿದೆ. ಆದ್ದರಿಂದ ಹೆಚ್ಚುವರಿ ಐ ಸಿ ಯು ವ್ಯವಸ್ಥೆ ಮಾಡಲು ಕ್ರಮವಹಿಸುವಂತೆ ಆಗ್ರಹಿಸಿದರು.

ಆಸ್ಪತ್ರೆಯ ಆವರಣದ ಒಳಗೆ ಖಾಸಗಿ ಆಂಬುಲೆನ್ಸ್ ಗಳ ನಿಲುಗಡೆಗೆ ಕಡಿವಾಣ ಹಾಕುವಂತೆ ತಿಳಿಸಿದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಿವಪ್ರಕಾಶ್ ಡಿ.ಎಸ್., ಸಮಿತಿಯ ಇತರ ಸದಸ್ಯರಾದ ಪದ್ಮನಾಭ ಅಮೀನ್, ಶ್ರೀಮತಿ ಪ್ರಮೀಳಾ ಈಶ್ವರ್, ಅನಿಲ್ ರಸ್ಕಿನ್ಹಾ, ಅಬ್ದುಲ್ ಸಲೀಮ್, ಶಶಿಧರ ಬಜಾಲ್, ದಾಮೋದರ ಪುತ್ತೂರು ಹಾಜರಿದ್ದರು.

Related posts

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನ್ಯಾಯಕ್ಕಾಗಿ ಎಸ್ಸೆಸ್ಸೆಫ್ ವತಿಯಿಂದ ವಿದ್ಯಾರ್ಥಿ ರ‍್ಯಾಲಿ ಹಾಗೂ ಪ್ರತಿಭಟನೆ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya
error: Content is protected !!