23.5 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಇಂಡಸ್ ಟವರ್ಸ್ ಕಾರ್ಮಿಕರ ನ್ಯಾಯಕ್ಕಾಗಿ ಭಾರತೀಯ ಮಜ್ದೂರು ಸಂಘದಿಂದ ದ.ಕ ಜಿಲ್ಲಾ ಸಂಸದರಿಗೆ ಮನವಿ

ಮಂಗಳೂರು: ಇಂಡಸ್ ಟವರ್ಸ್ ಲಿಮಿಟೆಡ್‌ನ ಒಪ್ಪಂದ ಆಧಾರಿತ ಕಂಪನಿಯಲ್ಲಿ ಹಲವು ತಿಂಗಳಿಂದ ವೇತನ, ಬೋನಸ್, ESI–PF ಹಾಗೂ ಇತರ ಕಾನೂನುಬದ್ಧ ಸವಲತ್ತುಗಳಿಂದ ವಂಚಿತರಾಗಿರುವ ಸುಮಾರು 150 ಗಿಂತ ಹೆಚ್ಚು ಕಾರ್ಮಿಕರ ಪರವಾಗಿ, ಭಾರತೀಯ ಮಜ್ದೂರು ಸಂಘ – ದಕ್ಷಿಣ ಕನ್ನಡ ಜಿಲ್ಲೆ ಇಂದು ಸಂಸದರ ಕಚೇರಿಗೆ ಭೇಟಿ ನೀಡಿ ಅವರ ಆಪ್ತ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.

ಕಾರ್ಮಿಕರ ಗಂಭೀರ ಸಮಸ್ಯೆಯನ್ನು ವಿವರಿಸಿದ ಮನವಿಯನ್ನು BMS ಜಿಲ್ಲಾ ಸಮಿತಿಯು ಅಧಿಕೃತವಾಗಿ ಸಲ್ಲಿಸಿದ್ದು, ಕಾರ್ಮಿಕರ ವೇತನ ಬಾಕಿ, ಹಕ್ಕು ಉಲ್ಲಂಘನೆಗಳು ಹಾಗೂ ಕಂಪನಿಯ ಅಪರಾಧ ನಿರ್ಲಕ್ಷ್ಯಗಳ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಮನವಿ ಸ್ವೀಕರಿಸಿದ ಅವರು ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕಾರ್ಮಿಕರ ಹಕ್ಕುಗಳನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸಂಸದರಿಗೆ ಮನವರಿಕೆ ಮಾಡುತ್ತೇವೆ ಎಂದು ತಿಳಿದರು.

BMS ಜಿಲ್ಲಾ ತಂಡದಿಂದ ತಿಳಿಸಿರುವಂತೆ:“ಕಾರ್ಮಿಕರ ನ್ಯಾಯಕ್ಕಾಗಿ ಹೋರಾಡುವುದು ನಮ್ಮ ಸಂಘಟನೆಯ ನೈತಿಕ ಹಾಗೂ ಕಾನೂನುಬದ್ಧ ಕರ್ತವ್ಯ. ಇಂಡಸ್ ಟವರ್ಸ್ ಕಾರ್ಮಿಕರ ಮೇಲೆ ನಡೆಯುತ್ತಿರುವ ಅನ್ಯಾಯವನ್ನು ಯಾವುದೇ ಪರಿಸ್ಥಿತಿಯಲ್ಲೂ ಸಹಿಸಲಿಕ್ಕಾಗದು. ನ್ಯಾಯ ಸಿಗುವವರೆಗೆ ನಾವು ಹೋರಾಟ ಮುಂದುವರಿಸುತ್ತೇವೆ” ಎಂದು ತಿಳಿಸಿದ್ದಾರೆ.

ಮನವಿ ಸಲ್ಲಿಕೆಯಲ್ಲಿ BMS ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು, BMS ರಾಜ್ಯ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ ಉಜಿರೆ, ಜಿಲ್ಲಾ ಪ್ರಮುಖರಾದ ನಾರಾಯಣ ಪೂಜಾರಿ, ನವೀನ್ ಬಂಟ್ವಾಳ, BPTMS ಜಿಲ್ಲಾ ಅಧ್ಯಕ್ಷ ಯಶಪಾಲ್, ಕಾರ್ಯದರ್ಶಿ ಶಿವರಾಮ್ ಮತ್ತು BPTMS ಮಜ್ದೂರು ಸಂಘದ ನಾಯಕರೂ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

Suddi Udaya

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!