23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

ಮಂಗಳೂರು: ಇಂಡಸ್ ಟವರ್ಸ್ ಲಿಮಿಟೆಡ್‌ನ ಒಪ್ಪಂದ ಆಧಾರಿತ ಕಂಪನಿಯಲ್ಲಿ ಕೆಲಸ ಮಾಡುವ ಸುಮಾರು 150 ಕಾರ್ಮಿಕರು ಕಳೆದ ಹಲವು ತಿಂಗಳಿಂದ ವೇತನ ಹಾಗೂ ಕಾನೂನುಬದ್ಧ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ಮಿನಿ ವಿಧಾನಸೌಧದ ಎದುರು ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಗೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ BMS ಘಟಕ ಬೆಂಬಲ ನೀಡಿತು.

ಕಾರ್ಮಿಕರು 8–10 ತಿಂಗಳ ವೇತನ ಬಾಕಿ, ಬೋನಸ್, ಭತ್ಯೆಗಳು, ಸೇವಾಶುಲ್ಕ ನೀಡದಿರುವುದು, ESI–PF ಸೌಲಭ್ಯಗಳ ಜಾರಿಗೆ ಕಂಪೆನಿಯ ನಿರ್ಲಕ್ಷ್ಯ, ಸುರಕ್ಷತಾ ಸಾಧನಗಳ ಕೊರತೆ, ಹಾಗೂ ಕೆಲಸದ ಒತ್ತಡ ಮತ್ತು ಬೆದರಿಕೆ ಇತ್ಯಾದಿ ಗಂಭೀರ ಸಮಸ್ಯೆಗಳನ್ನು ಹೊಂಚಿಕೊಳ್ಳುತ್ತಿದ್ದಾರೆ. ಈ ಸಂಕಷ್ಟದಿಂದ ಕುಟುಂಬ ನಿರ್ವಹಣೆ ಕಷ್ಟವಾಗಿದ್ದು, ಅನೇಕರು ಸಾಲದ ಅವಲಂಬಿತರಾಗಿರುವಂತ ಸ್ಥಿತಿ ಉಂಟಾಗಿದೆ.

ಇಂದು ನಡೆದ ಪ್ರತಿಭಟನೆಗೆ BMS ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು ನೇತೃತ್ವದ ತಂಡ ಹಾಜರಾಗಿ ಕಾರ್ಮಿಕರಿಗೆ ಧೈರ್ಯ ತುಂಬಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಅವರು ಮಾತನಾಡಿ, “ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ನಿರ್ಲಕ್ಷಿಸುವ ಯಾವುದೇ ಕಂಪನಿಯ ನೀತಿಯನ್ನು BMS ತೀವ್ರವಾಗಿ ಖಂಡಿಸುತ್ತದೆ. ಇಂಡಸ್ ಟವರ್ಸ್ ಕಾರ್ಮಿಕರಿಗೆ ಬಾಕಿ ಸಂಬಳ ಹಾಗೂ ಸೌಲಭ್ಯಗಳನ್ನು ತಕ್ಷಣ ಬಿಡುಗಡೆ ಮಾಡುವ ಬಗ್ಗೆ ಸಂಬಂಧಿತ ಇಲಾಖೆಗಳು ತುರ್ತು ಕ್ರಮ ಕೈಗೊಳ್ಳಬೇಕು,” ಎಂದು ಒತ್ತಾಯಿಸಿದರು. “ನ್ಯಾಯ ದೊರೆಯುವವರೆಗೂ ಇಂಡಸ್ ಟವರ್ಸ್ ಕಾರ್ಮಿಕರ ಹೋರಾಟದೊಂದಿಗೆ BMS ಜಿಲ್ಲಾ ಘಟಕ ನಿಲ್ಲುತ್ತದೆ.” ನಮ್ಮ ಕಾರ್ಮಿಕರಿಗೆ ಸರಿಯಾದ ರೀತಿಯಲ್ಲಿ ನ್ಯಾಯ ದೊರೆಯದೆ ಹೋದರೆ ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲಾ ಘಟಕ ಕಡೆಯಿಂದ ಇಡೀ ಜಿಲ್ಲೆಯ ಎಲ್ಲಾ ಕಾರ್ಮಿಕರನ್ನು ಸೇರಿಸಿಕೊಂಡು ದೊಡ್ಡ ಮಟ್ಟದ ಹೋರಾಟ ಮಾಡಬೇಕಾಗಬಹುದು ಎಂಬ ಎಚ್ಚರಿಕೆ ಯನ್ನು ನೀಡಿದರು, ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿ ವರ್ಗಕ್ಕೆ, ಇಲಾಖೆಗೆ, ಕಂಪನಿಗೆ ಜಿಲ್ಲಾ ಬಿಎಂಎಸ್ ಕಡೆಯಿಂದ ಪ್ರತ್ಯೇಕ ಮನವಿ, ಅವರ ಜೊತೆ ಮಾತುಕತೆ, ಮಾಡುವ ಪ್ರಯತ್ನ ಮಾಡುತ್ತೇವೆ ಎಂದರು.

ಈ ಪ್ರತಿಭಟನೆಯಲ್ಲಿ BMS ರಾಜ್ಯ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ, ಜಿಲ್ಲಾ ಉಪಾಧ್ಯಕ್ಷರಾದ ರೋಹಿತಾಶ್ವ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ ಉಜಿರೆ, ಜಿಲ್ಲಾ ಪ್ರಮುಖರಾದ ನಾರಾಯಣ ಪೂಜಾರಿ, ಶ್ರೀಕಾಂತ್ ಬಂಟ್ವಾಳ, ಸುದಿಂದ್ರ, ನವೀನ್ ಬಂಟ್ವಾಳ, BPTMS ಜಿಲ್ಲಾ ಅಧ್ಯಕ್ಷ ಯಶಪಾಲ್ ಸಾಲ್ಯಾನ್, ಕಾರ್ಯಕ್ರಮ
ಕಾರ್ಯದರ್ಶಿ ಶಿವರಾಮ್ ಮತ್ತು ನೂರಾರು ಕಾರ್ಮಿಕರು ಉಪಸ್ಥಿತರಿದ್ದರು.

Related posts

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya
error: Content is protected !!