July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಅದಿ ಧೂಮಾವತಿ ಕ್ಷೇತ್ರ ಸಾಯನ ಬೈದ್ಯರ ಗುರುಪೀಠ ದೇಯಿಬೈದ್ಧತಿ-ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸಮಾರು 7 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮವು ಶ್ರೀ ಕ್ಷೇತ್ರದ ತಂತ್ರಿಯವರಾದ ಶ್ರೀ ಶಿವಾನಂದ ತಂತ್ರಿಗಳ ಪೌರೋಹಿತ್ಯದಲ್ಲಿ ನ. 23 ರಂದು ಪೂರ್ವಾಹ್ನ ಗಂ. 10 ಕ್ಕೆ ಶೀ ಕ್ಷೇತ್ರದಲ್ಲಿ ನಡೆಯಲಿದೆ. ಗುಜರಾತ್ ಬರೋಡಾ ಉದ್ಯಮಿ ದಯಾನಂದ ಬೊಂಟ್ರ ರವರು ಯಾತ್ರಿ ನಿವಾಸ ಶಿಲಾನ್ಯಾಸ ನೆರವೆರಿಸಲಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಸೋಲೂರು ಮಠ ಆರ್ಯಈಡಿಗ ಮಹಾಸಂಸ್ಥಾನ, ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ರವರು ಆಶೀರ್ವಚನ ನೀಡಲಿದ್ದಾರೆ. ಸಭಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಗೆಜ್ಜೆಗಿರಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸಭಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅಥಿತಿಗಳಾಗಿ ಭಾರತ ಸರಕಾರ ಕೇಂದ್ರ ಮಂತ್ರಿ ಶ್ರೀಪಾದ ನಾಯ್ಕ, ಕರ್ನಾಟಕ ಸರಕಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದಕ್ಷಿಣ ಕನ್ನಡ ಕ್ಷೇತ್ರ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಶ್ರೀನಿವಾಸ ಪೂಜಾರಿ ಕೋಟ, ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ, ಕೋಡಿಂಬಾಡಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ಕುಮಾರ್, ಮೂಲ್ಕಿ-ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಎ ಉಮಾನಾಥ ಕೋಟ್ಯಾನ್, ಮುಂಬೈ ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷ ಹರೀಶ್ ಜಿ.ಅಮೀನ್, ಮುಂಬೈ ಬಿಲ್ಲದ ಚೇಂಬರ್ ಆಪ್ ಕಾಮರ್ಸ್, ನ ಅಧ್ಯಕ ಎನ್.ಟಿ.ಪೂಜಾರಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಅಧ್ಯಕ್ಷ ಜಯರಾಜ್ ಹೆಚ್.ಎಸ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಅಧ್ಯಕ್ಷ ಮಹೇಶ್ ಎನ್. ಅಂಚನ್, ಮಂಗಳೂರು ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ,ದ ಅಧ್ಯಕ ಕೆ ಚಿತ್ತರಂಜನ್ ಮಂಗಳೂರು ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.) ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮೆಸ್ಕಾಂ ಅಧ್ಯಕ್ಷರೂ ಆದ ಕೆ. ಹರೀಶ್ ಕುಮಾರ್.ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಖ್ಯಾತ ಬಹುಭಾಷಾ ಚಲನಚಿತ್ರ ನಟ ಸುಮನ್ ತಲ್ಯಾ‌ರ್, ದುಬೈ ಉದ್ಯಮಿ ಜಿತೇಂದ್ರ ಸುವರ್ಣ, ಮುಂಬೈ ಭಾರತ್ ಕೊ-ಅಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಸೂರ್ಯಕಾಂತ ಜಿ. ಸುವರ್ಣ, ಕರ್ನಾಟಕ ಸರಕಾರದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಃಸದ ನಳಿನ್ ಕುಮಾರ್ ಕಟೀಲ್ ಕರ್ನಾಟಕ ಸರಕಾರ ಮಾಜಿ ಸಚಿವ ಬಿ. ರಮಾನಾಥ ರೈ,, ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಟಿ. ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ,, ಪುತ್ತೂರು ಉಪವಿಭಾಗಾಧಿಕಾರಿ ಸ್ಟೈಲ್ಲಾ ವರ್ಗಿಸ್, ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಲತಾ ಎಂ, ಪುತ್ತೂರು ನಾರಾಯಣಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ, ಸತೀಶ್ ಕುಮಾರ್ ಕಡೆಂಜಿಗುತ್ತು, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ.ಅಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಬೆಸ್ಟ್ ಫೌಂಡೇಷನ್ (ರಿ.), ನ ಅಧ್ಯಕ್ಷ ರಕ್ಷಿತ್ ಶಿವರಾಂ, ಖ್ಯಾತ ಬಹುಭಾಷಾ ಚಲನಚಿತ್ರ ನಟ ವಿನೋದ್ ಆಳ್ವ, ಮೂಡಾಯೂರು, ಬೆಂಗಳೂರು ನಾರಾಯಣಗುರು ವಿಚಾರ ವೇದಿಕೆ (ರಿ.) ನ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಬೆಂಗಳೂರು ಕರ್ನಾಟಕ ಲೋಕ ಸೇವಾ ಆಯೋಗ, ಮಾಜಿ ಸದಸ್ಯ ಲಕ್ಷ್ಮೀನರಸಯ್ಯ, ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಹೇಮನಾಥ್ ಶೆಟ್ಟಿ ಕಾವು, ಬೆಂಗಳೂರು ಬಿಲ್ಲವರ ಅಸೋಸಿಯೇಷನ್ ನ ಅಧ್ಯಕ್ಷ ಎಂ. ವೇದಕುಮಾರ್, ನವದೆಹಲಿ ನೈವೇದ್ಯ ಗ್ರೂಪ್, ಉದ್ಯಮಿ ಶೇಖರ ಬಂಗೇರ, ಉದ್ಯಮಿ ಗಂಗಾಧರ ಅಮೀನ್, ನಾಸಿಕ್, ಮುಂಬೈ ಬಿಲ್ಲದ ಅಸೋಸಿಯೇಷನ್, ಗೌರವ ಅಧ್ಯಕ್ಷ ಎಲ್.ವಿ. ಅಮೀನ್, ದುಬೈ, ಉದ್ಯಮಿ ಗಂಗಾಧರ ಪೂಜಾರಿ, ಓಮನ್ ಬಿಲ್ಲವಾಸ್‌ ಮಾಜಿ ಅಧ್ಯಕ್ಷ ಎಸ್.ಕೆ. ಪೂಜಾರಿ, ಮಂಗಳೂರು ನಿಧಿಲ್ಯಾಂಡ್ ಇನ್ ಫ್ರಾಸ್ಟಕ್ಟರ್ ಡೆವಲಪರ್ಸ್ ಇಂಡಿಯಾ ಪ್ರೈ.ಲಿ ನ ಆಡಳಿತ ನಿರ್ದೇಶಕ ಪ್ರಶಾಂತ್ ಸನಿಲ್, ಮಂಗಳೂರು ಉದ್ಯಮಿ ಮನೋಜ್ ಸರಿಪಳ್ಳ,, ಮಂಗಳೂರು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಮಂಗಳೂರು ಬಿರ್ವರ್ ಕುಡ್ಡ, ಸ್ಥಾಪಕಾಧ್ಯಕ್ಷ ಉದಯ ಪೂಜಾರಿ, ಪಡುಮಲೆ ಶ್ರೀ ಶಾಸ್ತಾರ ಕೂವೇ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೈ ಕಟ್ಟಾವು, ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕೇಸರ ಈಶ್ವರ ಭಟ್ ಪಂಜಿದಗುಡ್ಡೆ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಟ್ರಸ್ಟಿ ಸಂತೋಷ್ ಜಿ. ಪೂಜಾರಿ, ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಅಧ್ಯಕ್ಷ ಭಗೀರಥ ಜಿ, ಕರ್ನಾಟಕ ಸರಕಾರ ಧಾರ್ಮಿಕ ದತ್ತಿ ಇಲಾಖೆಯ ಮಾಜಿ ಸದಸ್ಯ ಪದ್ಮನಾಭಕೋಟ್ಯಾನ್, ಮಂಗಳೂರು ಅತೃಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ನ ಚಿತ್ತರಂಜನ್ ಬೋಳಾರ್, ಮಂಗಳೂರು ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕ್ ಲಿ. ಅಧ್ಯಕ್ಷ ಚಂದ್ರಶೇಖರ ಕುಮಾರ್, ಉಡುಪಿ ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ನ ಅಧ್ಯಕ್ಷ ಹರೀಶ್ಚಂದ್ರ ಅಮೀನ್, ಮುಂಬೈ ಉದ್ಯಮಿ ಗಣೇಶ್ ಪೂಜಾರಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಟ್ರಸ್ಟಿ ಕೃತೀನ್ ಅಮೀನ್, ಭಾಗವಹಿಸಲಿದ್ದಾರೆ.ಎಂದು ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ (ರಿ) ಆಡಳಿತ ಮಂಡಳಿ, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರುಗಳು ಹಾಗೂ ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು ದೇಯಿ ಬೈದೆತಿ ಕೋಟಿ-ಚೆನ್ನಯ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya

ನಾರಾವಿಯ ಶರತ್ ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya
error: Content is protected !!