32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

ಬೆಳ್ತಂಗಡಿ: ಚಾರಣಪ್ರಿಯರಿಗೆ ನ.20ರಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಹಲವು ತಿಂಗಳಿನಿಂದ ಕಾಡ್ಗಿಚ್ಚು ಭಯ, ಮಳೆಗಾಲ ಇತ್ಯಾದಿ ಕಾರಣಗಳಿಂದ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿತ್ತು. ಪ್ರಸ್ತುತ ಮಳೆ ಕಡಿಮೆಯಾಗಿದ್ದು, ಇದೀಗ ಮತ್ತೆ ಅವಕಾಶ ಕಲ್ಪಿಸಲಾಗಿದೆ.

ನೂರಾರು ಅಡಿ ಎತ್ತರದಿಂದ ನೀರು ಬಂಡಾಜೆ ಜಲಪಾತ ಧುಮ್ಮಿಕ್ಕುವ ಪ್ರದೇಶಕ್ಕೆ ಬೆಳ್ತಂಗಡಿ ತಾಲೂಕಿನ ಕಡಿರು ದ್ಯಾವರದಿಂದ ಚಾರಣದ ಮೂಲಕ ತಲುಪಬಹುದು. ಕುದುರೆಮುಖ ರಾಷ್ಟ್ರೀಯ ಉದ್ಯಾನ ವನದ ವ್ಯಾಪ್ತಿ ಯಲ್ಲಿರುವ ಈ ಜಲಪಾತಕ್ಕೆ ಹೋಗ ಬೇಕಾದರೆ 11 ಕಿ.ಮೀ. ದೂರವನ್ನು ಚಾರಣದ ಮೂಲಕವೇ ತಲುಪಬೇಕು.

ಕಡಿರುದ್ಯಾವರದಿಂದ ಕಡಿದಾದ ಹಾದಿ, ಜಾರುವ ಬಂಡೆಗಳು, ಅರಣ್ಯ ಪ್ರದೇಶ, ಸುತ್ತಲೂ ಬೆಳೆದಿರುವ ಮುಳಿ ಹುಲ್ಲು ಪೊದೆಗಳು ಅಲ್ಲಲ್ಲಿ ಹರಿಯುವ ನೀರು, ಇಂಬಳಗಳ ಕಾಟದೊಂದಿಗೆ ಚಾರಣ ನಡೆಸಿ ಆಕರ್ಷಕವಾದ ಬಂಡಾಜೆ ಜಲಪಾತವನ್ನು ತಲುಪಬಹುದು.

ರಮಣೀಯವಾದ ಈ ಜಲಪಾತ ವೀಕ್ಷಣೆಗೆ ತೆರಳುವ ವೇಳೆ ಕಾಡಾನೆ ಸಹಿತ ಇತರ ವನ್ಯಜೀವಿಗಳು ಎದುರಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಅತಿ ಅಗತ್ಯ, ಜಲಪಾತಕ್ಕೆ ತೆರಳುವ ದಾರಿಯ ಮಾಹಿತಿ ಇರುವ ಸ್ಥಳೀಯರು ಜತೆಗಿದ್ದರೆ ತಲುಪುವುದು ಸುಲಭ, ಚಾರಣದ ವೇಳೆ ಒಂದಿಷ್ಟು ದಾರಿ ತಪ್ಪಿದರೂ ಯಾವುದೇ ಮೊಬೈಲ್ ನೆಟ್ವಕ್ ೯ ಇಲ್ಲದ ಈ ಪರಿಸರದಲ್ಲಿ ಅಲೆಯ ಬೇಕಾಗಬಹುದು. ಈ ಹಿಂದೆ ಇಂತಹ ಹಲವಾರು ಪ್ರಕರಣಗಳು ನಡೆದಿವೆ.

ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಲ್ಲಿರುವ ಈ ಜಲಪಾತಕ್ಕೆ ಕೊಟ್ಟಿಗೆಹಾರದ ಮೂಲಕವೂ ಹೋಗಬಹುದು. ಈ ಭಾಗದಿಂದ ಯಾವುದೇ ಪ್ರವೇಶ ನಿಷೇಧ ಇರಲಿಲ್ಲವಾದ ಕಾರಣ ಇಲ್ಲಿಗೆ ಸಾಕಷ್ಟು ಮಂದಿ ಬರುತ್ತಿದ್ದಾರೆ. ಆದರೆ ಕಡಿರು ದ್ಯಾವರದ ಮೂಲಕ ಚಾರಣ ನಡೆಸಿ ಜಲಪಾತ ವೀಕ್ಷಿಸುವ ಆನಂದ ಇಲ್ಲಿ ಸಿಗುವುದು ಕಡಿಮೆ.

Related posts

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya
error: Content is protected !!