September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

ಬೆಳ್ತಂಗಡಿ: ವೆನ್ಲಾಕ್ ರಕ್ಷಾ ಸಮಿತಿಯ ಸಭೆಯು ವೈದ್ಯಕೀಯ ಅಧೀಕ್ಷಕರ ಕಛೇರಿಯಲ್ಲಿ ನ.18 ರಂದು ನಡೆಯಿತು. ಈ ಸಭೆಯಲ್ಲಿ ರಕ್ಷಾ ಸಮಿತಿಗೆ ಬೆಳ್ತಂಗಡಿ ತಾಲೂಕಿನಿಂದ ನಾಮನಿರ್ದೇಶಿತರಾಗಿರುವ ಕಳಿಯ ಗ್ರಾ.ಪಂ ಸದಸ್ಯ ಅಬ್ದುಲ್ ಕರೀಂ ಗೇರುಕಟ್ಟೆ ಮತ್ತು ತಾ.ಪಂ ಮಾಜಿ ಸದಸ್ಯ ಜಯರಾಮ ಭಾಗಿಯಾದರು.

ಸಭೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಯ ಸಿಬ್ಬಂದಿಗಳು ಜನಸ್ನೇಹಿಯಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಲು ಮತ್ತು ಹೊರ ಜಿಲ್ಲೆಗಳಿಂದ ಅತೀ ಹೆಚ್ಚು ರೋಗಿಗಳು ತುರ್ತು ಚಿಕಿತ್ಸೆಗಾಗಿ ಬರುವುದರಿಂದ ನಮ್ಮ ಜಿಲ್ಲೆಯ ರೋಗಿಗಳಿಗೆ ತುರ್ತು ಐ ಸಿ ಯು ಲಭ್ಯ ಇಲ್ಲದೇ ಬಡವರು ಖಾಸಗಿ ಆಸ್ಪತ್ರೆಗೆ ಹೋಗುವ ಪರಿಸ್ಥಿತಿ ಬಂದಿದೆ. ಆದ್ದರಿಂದ ಹೆಚ್ಚುವರಿ ಐ ಸಿ ಯು ವ್ಯವಸ್ಥೆ ಮಾಡಲು ಕ್ರಮವಹಿಸುವಂತೆ ಆಗ್ರಹಿಸಿದರು.

ಆಸ್ಪತ್ರೆಯ ಆವರಣದ ಒಳಗೆ ಖಾಸಗಿ ಆಂಬುಲೆನ್ಸ್ ಗಳ ನಿಲುಗಡೆಗೆ ಕಡಿವಾಣ ಹಾಕುವಂತೆ ತಿಳಿಸಿದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಿವಪ್ರಕಾಶ್ ಡಿ.ಎಸ್., ಸಮಿತಿಯ ಇತರ ಸದಸ್ಯರಾದ ಪದ್ಮನಾಭ ಅಮೀನ್, ಶ್ರೀಮತಿ ಪ್ರಮೀಳಾ ಈಶ್ವರ್, ಅನಿಲ್ ರಸ್ಕಿನ್ಹಾ, ಅಬ್ದುಲ್ ಸಲೀಮ್, ಶಶಿಧರ ಬಜಾಲ್, ದಾಮೋದರ ಪುತ್ತೂರು ಹಾಜರಿದ್ದರು.

Related posts

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya
error: Content is protected !!