23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

ಬೆಳ್ತಂಗಡಿ: ವೆನ್ಲಾಕ್ ರಕ್ಷಾ ಸಮಿತಿಯ ಸಭೆಯು ವೈದ್ಯಕೀಯ ಅಧೀಕ್ಷಕರ ಕಛೇರಿಯಲ್ಲಿ ನ.18 ರಂದು ನಡೆಯಿತು. ಈ ಸಭೆಯಲ್ಲಿ ರಕ್ಷಾ ಸಮಿತಿಗೆ ಬೆಳ್ತಂಗಡಿ ತಾಲೂಕಿನಿಂದ ನಾಮನಿರ್ದೇಶಿತರಾಗಿರುವ ಕಳಿಯ ಗ್ರಾ.ಪಂ ಸದಸ್ಯ ಅಬ್ದುಲ್ ಕರೀಂ ಗೇರುಕಟ್ಟೆ ಮತ್ತು ತಾ.ಪಂ ಮಾಜಿ ಸದಸ್ಯ ಜಯರಾಮ ಭಾಗಿಯಾದರು.

ಸಭೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಯ ಸಿಬ್ಬಂದಿಗಳು ಜನಸ್ನೇಹಿಯಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಲು ಮತ್ತು ಹೊರ ಜಿಲ್ಲೆಗಳಿಂದ ಅತೀ ಹೆಚ್ಚು ರೋಗಿಗಳು ತುರ್ತು ಚಿಕಿತ್ಸೆಗಾಗಿ ಬರುವುದರಿಂದ ನಮ್ಮ ಜಿಲ್ಲೆಯ ರೋಗಿಗಳಿಗೆ ತುರ್ತು ಐ ಸಿ ಯು ಲಭ್ಯ ಇಲ್ಲದೇ ಬಡವರು ಖಾಸಗಿ ಆಸ್ಪತ್ರೆಗೆ ಹೋಗುವ ಪರಿಸ್ಥಿತಿ ಬಂದಿದೆ. ಆದ್ದರಿಂದ ಹೆಚ್ಚುವರಿ ಐ ಸಿ ಯು ವ್ಯವಸ್ಥೆ ಮಾಡಲು ಕ್ರಮವಹಿಸುವಂತೆ ಆಗ್ರಹಿಸಿದರು.

ಆಸ್ಪತ್ರೆಯ ಆವರಣದ ಒಳಗೆ ಖಾಸಗಿ ಆಂಬುಲೆನ್ಸ್ ಗಳ ನಿಲುಗಡೆಗೆ ಕಡಿವಾಣ ಹಾಕುವಂತೆ ತಿಳಿಸಿದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಿವಪ್ರಕಾಶ್ ಡಿ.ಎಸ್., ಸಮಿತಿಯ ಇತರ ಸದಸ್ಯರಾದ ಪದ್ಮನಾಭ ಅಮೀನ್, ಶ್ರೀಮತಿ ಪ್ರಮೀಳಾ ಈಶ್ವರ್, ಅನಿಲ್ ರಸ್ಕಿನ್ಹಾ, ಅಬ್ದುಲ್ ಸಲೀಮ್, ಶಶಿಧರ ಬಜಾಲ್, ದಾಮೋದರ ಪುತ್ತೂರು ಹಾಜರಿದ್ದರು.

Related posts

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya
error: Content is protected !!