30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

ಬೆಳ್ತಂಗಡಿ: ಅನುಗ್ರಹ ಟ್ರೈನಿಂಗ್ ಕಾಲೇಜು ಬೆಳ್ತಂಗಡಿ, ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ಮತ್ತು ಪಡಿ ಮಂಗಳೂರು ಇವರ ಸಹಬಾಗಿತ್ವದಲ್ಲಿ 2025 ರ ಸಾಲಿನ ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮದ ಉದ್ಘಾಟನೆಯು ಬೆಳ್ತಂಗಡಿ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು .

ಮಕ್ಕಳ ಹಕ್ಕುಗಳಿಗೆ ಧ್ವನಿ ಆಗೋಣ, ಮಕ್ಕಳ ಹಕ್ಕುಗಳನ್ನು ಗೌರವಿಸೋಣ, ಮಕ್ಕಳು ಸುರಕ್ಷಿತವಾಗಿದ್ದರೆ ಸಮಾಜ ಸುರಕ್ಷಿತವಾಗಿರುತ್ತದೆ ಎಂಬ ಈ ಘೋಷಣೆಯನ್ನು ಬ್ಯಾನರ್ ಬಿಡಿಸುವ ಮೂಲಕ ಅನುಗ್ರಹ ಟ್ರೈನಿಂಗ್ ಕಾಲೇಜು ಬೆಳ್ತಂಗಡಿ ಇದರ ಮ್ಯಾನೇಜಿಂಗ್ ಡೈರೆಕ್ಟರ್ ತಲ್ಹತ್ ಎಂ.ಜಿ ರವರು ಉದ್ಘಾಟಿಸಿದರು.

ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ಜಿಲ್ಲಾ ಸಂಚಾಲಕರಾದ ಮಹಮ್ಮದ್ ರಫೀಕ್ ದರ್ಬೆ ಇವರು ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಹೇಳಿದರು .
ದಕ್ಷಿಣ ಕನ್ನಡ ಜಿಲ್ಲಾ ಬಾಲ ನ್ಯಾಯಮಂಡಳಿಯ ನಿಕಟ ಪೂರ್ವ ಸದಸ್ಯರು ಮತ್ತು ಪಡಿ ಸಂಸ್ಥೆಯ ಸಂಯೋಜಕರಾದ ಕಸ್ತೂರಿ ಬೊಳುವಾರು ಇವರು ಸಮಾಜ ಸುಭದ್ರವಾಗಿದ್ದರೆ ಅಲ್ಲಿ ಮಕ್ಕಳು ಭದ್ರವಾಗಿರುತ್ತಾರೆ, ಮಕ್ಕಳನ್ನು ಅವರ ಹಕ್ಕುಗಳಿಂದ ವಂಚಿತರಾಗದಂತೆ ರಕ್ಷಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಹದಿಹರೆಯದಲ್ಲಿ ಮಕ್ಕಳು ತಮ್ಮ ಜೀವನದ ಗುರಿಯನ್ನು ನಿರ್ಧರಿಸುವಲ್ಲಿ ಸಮಾಜವು ಮಕ್ಕಳಿಗೆ ಸಹಕಾರಿಯಾಗಬೇಕು ಎಂದು ಹೇಳಿದರು. ಮಕ್ಕಳ ರಕ್ಷಣೆಗೆ ಹಲವಾರು ಕಾನೂನುಗಳು ಇದ್ದರೂ ಕೂಡ ಮಕ್ಕಳು ಒಂದಲ್ಲ ಒಂದು ಸಮಸ್ಯೆಗಳಿಗೆ ಒಳಗಾಗುವುದನ್ನು ನೋಡುತ್ತಿದ್ದೇವೆ ಅದಕ್ಕಾಗಿ ಪ್ರತಿಯೊಬ್ಬರನ್ನು ಜಾಗೃತಗೊಳಿಸುವ ಅಗತ್ಯತೆ ಇದೆ ಎಂದು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಜಿಲ್ಲಾ ಸಹ ಸಂಚಾಲಕರಾದ ರಮಾನಂದ ಸಾಲಿಯಾನ್ ಮುಂಡೂರು ಹೇಳಿದರು.

ಬೆಳ್ತಂಗಡಿ ತಾಲೂಕು ಮಕ್ಕಳ ಹಕ್ಕುಗಳ ಮಹೋತ್ಸವ ಸಮಿತಿಯ ಸಹ ಸಂಚಾಲಕರಾದ ಮಹಮ್ಮದ್ ನಜೀರ್ ಎಚ್ ಮಾತನಾಡಿ ಹಲವಾರು ಮಕ್ಕಳು ಸರಕಾರ ನಿಗದಿಪಡಿಸಿರುವ ವೈಯಕ್ತಿಕ ದಾಖಲೆಗಳನ್ನು ಹೊಂದಿರದ ಕಾರಣ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ವಂಚಿತರಾಗುತ್ತಿದ್ದಾರೆ ಈ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಅನುಗ್ರಹ ಟ್ರೈನಿಂಗ್ ಕಾಲೇಜು ನಿರ್ದೇಶಕರಾದ ತೌಸಿಫ್ ಕಕ್ಕಿಂಜೆ ರವರು ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಬೆಳ್ತಂಗಡಿ ತಾಲೂಕು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ತಾಲೂಕು ಸಂಚಾಲಕ ಅಬ್ದುಲ್ ಖಾದರ್ ನಾವೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಈ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲ ಸಂಘ-ಸಂಸ್ಥೆಗಳು ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಬೆಳ್ತಂಗಡಿ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಪದಾಧಿಕಾರಿಗಳಾದ ಶ್ರೀಮತಿ ಜಲಜಾಕ್ಷಿ ಗುರುವಾಯನಕೆರೆ ಮತ್ತು ನವೀನ್ ಮೇಲಂತಬೆಟ್ಟು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನುಗ್ರಹ ಟ್ರೈನಿಂಗ್ ಕಾಲೇಜಿನ ಫೈರ್ ಅಂಡ್ ಸೇಫ್ಟಿ ವಿಭಾಗದ ಮುಖ್ಯಸ್ಥೆ ಅಂಕಿತ ಕಾರ್ಯಕ್ರಮವನ್ನು ನಿರೂಪಿಸಿದರು. ಶಮೀಮ ವಂದಿಸಿದರು.

Related posts

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ

Suddi Udaya

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya
error: Content is protected !!