September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವದಲ್ಲಿ ಎಲ್ . ಸಿ. ಆರ್ ವಿದ್ಯಾ ಸಂಸ್ಥೆಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ , ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲಾ ವಿಭಾಗ ವಾಮದಪದವು ಇವರ ಜಂಟಿ ಆಶ್ರಯದಲ್ಲಿ 2025-26 ನೇ ಸಾಲಿನ ವಾಮದ ಪದವು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವವು ನ.19ರಂದು ನಡೆಯಿತು.

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳು ವಲಯ ಮಟ್ಟದ ಕಲೋತ್ಸವ ಸ್ಪರ್ಧೆಯಲ್ಲಿ ಭಾಗವಹಿಸಿ ಅಮೋಘ ಸಾಧನೆಯನ್ನು ಮಾಡಿರುತ್ತಾರೆ.

ಕವನ ವಾಚನ ಸ್ಪರ್ಧೆ ಮತ್ತು ಚರ್ಚಾಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಪ್ರತಿಕ್ಷಾ ಪ್ರಥಮ ಸ್ಥಾನ, ಇಂಗ್ಲೀಷ್ ಭಾಷಣದಲ್ಲಿ ಒಂಬತ್ತನೇ ತರಗತಿಯ ಸಮನ್ವಿ ಎಚ್ . ಕೆ. ಪ್ರಥಮ ಸ್ಥಾನ, ಭಾವಗೀತೆ ಸ್ಪರ್ಧೆಯಲ್ಲಿ ಎಂಟನೇ ತರಗತಿಯ ತನ್ವಿ ಜೆ. ಪಿ. ಪ್ರಥಮ ಸ್ಥಾನ, ಜನಪದ ಗೀತೆ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿಯ ಹಿತೇಶ್ ಟಿ ಆರ್ ದ್ವಿತೀಯ ಸ್ಥಾನ ಹಾಗೂ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿಯ ಅಧಿತಿ ಎಂ ಪ್ರಭು ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ಒಟ್ಟು 4 ಪ್ರಥಮ ಹಾಗೂ 2 ದ್ವಿತೀಯ ಬಹುಮಾನಗಳನ್ನು ಪಡೆಯುವುದರ ಮೂಲಕ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯು ವಲಯ ಮಟ್ಟದ ಕಲೋತ್ಸವದ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದು,
ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ 6 ವಿದ್ಯಾರ್ಥಿಗಳು ತಾಲೂಕು ಮಟ್ಟದ ಕಲೋತ್ಸವಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ಚಂದ್ರಮಂಡಲ ರಥೋತ್ಸವ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya
error: Content is protected !!