September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ಎಸ್.ಐ.ಟಿ ಅಧಿಕಾರಿಗಳು ನ.20 ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು (Perjury Report) ಅಂಡರ್ ಸೆಕ್ಷನ್(u/s) 215 ಅಡಿಯಲ್ಲಿ ಸಲ್ಲಿಕೆ ಮಾಡಿದ್ದಾರೆ.

ಬೆಳ್ತಂಗಡಿ ಎಸ್.ಐ.ಟಿ ಅಧಿಕಾರಿಗಳು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿ ‘ಸುಳ್ಳು ಸಾಕ್ಷಿ’ ವರದಿಯನ್ನು (Perjury Report) ಅಂಡರ್ ಸೆಕ್ಷನ್(u/s) 215 ಅಡಿಯಲ್ಲಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಮುಂದೆ ನ.20 ರಂದು ಸಂಜೆ 3:15 ಕ್ಕೆ ಗಂಟೆಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ತಂಡದವರು ಸಲ್ಲಿಕೆ ಮಾಡಿದ್ದಾರೆ.

ಎಸ್‌ಐಟಿ ವರದಿಯಲ್ಲಿ ಸುಮಾರು 3,923 ಪುಟಗಳನ್ನು ನಮೂದಿಸಿದ್ದಾರೆ. ಐದು ಮಂದಿ ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬುವುದಾಗಿ ವರದಿಯ ಆಧಾರದಲ್ಲಿ ಮುಂದಿನ ತನಿಖೆ ಬಗ್ಗೆ ನ್ಯಾಯಾಲಯ ಸೂಚನೆ ನೀಡುವಂತೆ ವರದಿಯಲ್ಲಿ ತಿಳಿಸಲಾಗಿದೆ‌.ಒಟ್ಟು ಪ್ರಕರಣದ ತನಿಖೆ ಮುಗಿಸಿದ ಬಳಿಕ ಮುಂದಿನ ದಿನಗಳಲ್ಲಿ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya
error: Content is protected !!