ಮುಂಡಾಜೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರ, ಉಜಿರೆ ಇದರ ಸಮಾಜ ಕಾರ್ಯ ವಿಭಾಗದ ವತಿಯಿಂದ ‘ ಪೌಷ್ಠಿಕ ಆಹಾರ ಮತ್ತು ಆರೋಗ್ಯ ‘ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಪ್ರೌಢಶಾಲೆ, ಮುಂಡಾಜೆ ಇಲ್ಲಿ ನಡೆಸಲಾಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರ, ಉಜಿರೆ ಇಲ್ಲಿಯ ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸುದರ್ಶನ್ ಪಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.

ಪೌಷ್ಠಿಕ ಆಹಾರದ ಅರ್ಥ, ಪೌಷ್ಠಿಕ ಆಹಾರದ ಅನುಕೂಲಗಳು, ಜಂಕ್ ಫುಡ್ ಮತ್ತು ಅದರ ಪರಿಣಾಮಗಳು ಹಾಗೂ ಸಮತೋಲನ ಆಹಾರ ಮತ್ತು ಅದರ ಉಪಯೋಗಗಳು ಮುಂತಾದ ವಿಷಯಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.
ಶಾಲೆಯ ವಿಜ್ಞಾನ ವಿಭಾಗದ ಶಿಕ್ಷಕರಾದ ಶ್ರೀ ಎಂ. ಟಿ. ಸುರೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್, ಕೆ. ಭರತ್, ನಿತಿನ್ ಆರ್, ವಂದಿತಾ ಪ್ರಭು ಟಿ, ವಿಜೇತ್ ಮತ್ತು ಯಶ್ಮಿತಾ ಎ ರವರು ಕಾರ್ಯಕ್ರಮವನ್ನು ಆಯೋಜಿಸಿ, ನಡೆಸಿಕೊಟ್ಟರು.











