22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

ಮುಂಡಾಜೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರ, ಉಜಿರೆ ಇದರ ಸಮಾಜ ಕಾರ್ಯ ವಿಭಾಗದ ವತಿಯಿಂದ ‘ ಪೌಷ್ಠಿಕ ಆಹಾರ ಮತ್ತು ಆರೋಗ್ಯ ‘ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಪ್ರೌಢಶಾಲೆ, ಮುಂಡಾಜೆ ಇಲ್ಲಿ ನಡೆಸಲಾಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರ, ಉಜಿರೆ ಇಲ್ಲಿಯ ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸುದರ್ಶನ್ ಪಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.

ಪೌಷ್ಠಿಕ ಆಹಾರದ ಅರ್ಥ, ಪೌಷ್ಠಿಕ ಆಹಾರದ ಅನುಕೂಲಗಳು, ಜಂಕ್ ಫುಡ್ ಮತ್ತು ಅದರ ಪರಿಣಾಮಗಳು ಹಾಗೂ ಸಮತೋಲನ ಆಹಾರ ಮತ್ತು ಅದರ ಉಪಯೋಗಗಳು ಮುಂತಾದ ವಿಷಯಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.

ಶಾಲೆಯ ವಿಜ್ಞಾನ ವಿಭಾಗದ ಶಿಕ್ಷಕರಾದ ಶ್ರೀ ಎಂ. ಟಿ. ಸುರೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್, ಕೆ. ಭರತ್, ನಿತಿನ್ ಆರ್, ವಂದಿತಾ ಪ್ರಭು ಟಿ, ವಿಜೇತ್ ಮತ್ತು ಯಶ್ಮಿತಾ ಎ ರವರು ಕಾರ್ಯಕ್ರಮವನ್ನು ಆಯೋಜಿಸಿ, ನಡೆಸಿಕೊಟ್ಟರು.

Related posts

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!