22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

ಮುಂಡಾಜೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರ, ಉಜಿರೆ ಇದರ ಸಮಾಜ ಕಾರ್ಯ ವಿಭಾಗದ ವತಿಯಿಂದ ‘ ಪೌಷ್ಠಿಕ ಆಹಾರ ಮತ್ತು ಆರೋಗ್ಯ ‘ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಪ್ರೌಢಶಾಲೆ, ಮುಂಡಾಜೆ ಇಲ್ಲಿ ನಡೆಸಲಾಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರ, ಉಜಿರೆ ಇಲ್ಲಿಯ ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸುದರ್ಶನ್ ಪಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.

ಪೌಷ್ಠಿಕ ಆಹಾರದ ಅರ್ಥ, ಪೌಷ್ಠಿಕ ಆಹಾರದ ಅನುಕೂಲಗಳು, ಜಂಕ್ ಫುಡ್ ಮತ್ತು ಅದರ ಪರಿಣಾಮಗಳು ಹಾಗೂ ಸಮತೋಲನ ಆಹಾರ ಮತ್ತು ಅದರ ಉಪಯೋಗಗಳು ಮುಂತಾದ ವಿಷಯಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.

ಶಾಲೆಯ ವಿಜ್ಞಾನ ವಿಭಾಗದ ಶಿಕ್ಷಕರಾದ ಶ್ರೀ ಎಂ. ಟಿ. ಸುರೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್, ಕೆ. ಭರತ್, ನಿತಿನ್ ಆರ್, ವಂದಿತಾ ಪ್ರಭು ಟಿ, ವಿಜೇತ್ ಮತ್ತು ಯಶ್ಮಿತಾ ಎ ರವರು ಕಾರ್ಯಕ್ರಮವನ್ನು ಆಯೋಜಿಸಿ, ನಡೆಸಿಕೊಟ್ಟರು.

Related posts

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya
error: Content is protected !!