July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

ಬೆಳ್ತಂಗಡಿ: ಸೇವಾಭಾರತಿಯ ಪ್ರಮುಖ ಮೂರು ಯೋಜನೆಗಳಿಗೆ ಸಂಚಾಲಕರನ್ನು ಇತ್ತೀಚೆಗೆ ನೇಮಕ ಮಾಡಲಾಗಿದೆ. ಸೇವಾಧಾಮ ಯೋಜನೆಯ ಸಂಚಾಲಕರಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸೃಷ್ಟಿ ಪುರಂದರ ರಾವ್ ರವರನ್ನು ಮುಂದುವರೆಸಲಾಗಿದೆ. ಆರೋಗ್ಯಮ್ ಯೋಜನೆಗೆ ನೇತ್ರಾವತಿಯ ಅಖಿಲೇಶ್ ಶೆಟ್ಟಿಯವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದ್ದು, ಸಬಲಿನಿ ಯೋಜನೆಗೆ ಇತ್ತೀಚೆಗೆ ಶ್ರೀ ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಪಿಜತ್ತನಡ್ಕದ ಶ್ರೀಮತಿ ಮಮತಾ ಬಿ ಯವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.

ಸೇವಾಧಾಮ ಯೋಜನೆಯಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಸೌತಡ್ಕದಲ್ಲಿ ಸೇವಾಧಾಮ ಪುನಶ್ಚೇತನ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಸಬಲಿನಿ ಯೋಜನೆಯಡಿ ಉಚಿತ ಟೈಲರಿಂಗ್ ತರಬೇತಿಗಳನ್ನು ನೀಡುತ್ತಿದ್ದು, ಆರೋಗ್ಯಮ್ ಯೋಜನೆಯಡಿ ರಕ್ತದಾನ ಶಿಬಿರಗಳು ಹಾಗೂ ಆಂಬುಲೆನ್ಸ್ ಸೇವೆ ಅನುಷ್ಠಾನಗೊಳ್ಳುತ್ತಿದೆ.

Related posts

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya
error: Content is protected !!