23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

ಬೆಳ್ತಂಗಡಿ: ಸೇವಾಭಾರತಿಯ ಪ್ರಮುಖ ಮೂರು ಯೋಜನೆಗಳಿಗೆ ಸಂಚಾಲಕರನ್ನು ಇತ್ತೀಚೆಗೆ ನೇಮಕ ಮಾಡಲಾಗಿದೆ. ಸೇವಾಧಾಮ ಯೋಜನೆಯ ಸಂಚಾಲಕರಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸೃಷ್ಟಿ ಪುರಂದರ ರಾವ್ ರವರನ್ನು ಮುಂದುವರೆಸಲಾಗಿದೆ. ಆರೋಗ್ಯಮ್ ಯೋಜನೆಗೆ ನೇತ್ರಾವತಿಯ ಅಖಿಲೇಶ್ ಶೆಟ್ಟಿಯವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದ್ದು, ಸಬಲಿನಿ ಯೋಜನೆಗೆ ಇತ್ತೀಚೆಗೆ ಶ್ರೀ ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಪಿಜತ್ತನಡ್ಕದ ಶ್ರೀಮತಿ ಮಮತಾ ಬಿ ಯವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.

ಸೇವಾಧಾಮ ಯೋಜನೆಯಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಸೌತಡ್ಕದಲ್ಲಿ ಸೇವಾಧಾಮ ಪುನಶ್ಚೇತನ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಸಬಲಿನಿ ಯೋಜನೆಯಡಿ ಉಚಿತ ಟೈಲರಿಂಗ್ ತರಬೇತಿಗಳನ್ನು ನೀಡುತ್ತಿದ್ದು, ಆರೋಗ್ಯಮ್ ಯೋಜನೆಯಡಿ ರಕ್ತದಾನ ಶಿಬಿರಗಳು ಹಾಗೂ ಆಂಬುಲೆನ್ಸ್ ಸೇವೆ ಅನುಷ್ಠಾನಗೊಳ್ಳುತ್ತಿದೆ.

Related posts

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya
error: Content is protected !!