23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ನ.20 ರಂದು ಶಾಲಾ ಸಂಚಾಲಕರಾದ ವಂ. ಫಾ| ಅಬೆಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಗಳಾಗಿ ರಾಂಬೊ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಮಾಲಕರಾದ ರೆಜಿನಾಲ್ಡ್ ಸಲ್ದಾನ, ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ, ಅಂತಾರಾಷ್ಟ್ರೀಯ ವಾಲಿಬಾಲ್ ಆಟಗಾರ್ತಿ ವಿಲೋನಾ ಡಿಕುನ್ಹಾ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆಂಟನಿ ಫೆರ್ನಾಂಡಿಸ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಗುರುರಾಜ್ ಶಬರಾಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರೆಜಿನಾಲ್ಡ್ ಸಲ್ದಾನ ಹಾಗೂ ವಿಲೋನಾ ಡಿಕುನ್ಹಾ ಇವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾದ ರೆಜಿನಾಲ್ಡ್ ಸಲ್ದಾನ ಇವರು ಶಾಲೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾ ಶಾಲಾ ಜೀವನದಲ್ಲಿ ಆಟದ ಮಹತ್ವದ ಬಗ್ಗೆ ತಿಳಿಸಿದರು. ವಿಲೋನಾ ಡಿಕುನ್ಹಾ ಅವರು ತನ್ನ ಸಾಧನೆಗೆ ಅನುಗ್ರಹ ಶಿಕ್ಷಣ ಸಂಸ್ಥೆ ಹಾಗೂ ದೈಹಿಕ ಶಿಕ್ಷಕರ ಪ್ರೋತ್ಸಾಹದ ಕುರಿತು ಶ್ಲಾಘನೀಯ ಮಾತುಗಳಾಡಿದರು. ಶಾಲಾ ಸಂಚಾಲಕರು ಸೋಲು ಗೆಲುವುಗಳನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು. ದೈಹಿಕ ಶಿಕ್ಷಕರಾದ ವಸಂತ್ ಹೆಗಡೆ ಹಾಗೂ ನಿಶ್ಚಿತ್ ಕ್ರೀಡಾಕೂಟವನ್ನು ಉತ್ತಮವಾಗಿ ನಿರ್ವಹಿಸಿದರು. ಎಲ್ಲಾ ಸಹ ಶಿಕ್ಷಕರು, ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು. ಸಹ ಶಿಕ್ಷಕ ರವಿಕುಮಾರ್ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ವಿನಯ ಲತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಅಭಿನಂದಿಸಲಾಯಿತು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya
error: Content is protected !!