22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

ಬೆಳ್ತಂಗಡಿ: ಅನುಗ್ರಹ ಟ್ರೈನಿಂಗ್ ಕಾಲೇಜು ಬೆಳ್ತಂಗಡಿ, ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ಮತ್ತು ಪಡಿ ಮಂಗಳೂರು ಇವರ ಸಹಬಾಗಿತ್ವದಲ್ಲಿ 2025 ರ ಸಾಲಿನ ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮದ ಉದ್ಘಾಟನೆಯು ಬೆಳ್ತಂಗಡಿ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು .

ಮಕ್ಕಳ ಹಕ್ಕುಗಳಿಗೆ ಧ್ವನಿ ಆಗೋಣ, ಮಕ್ಕಳ ಹಕ್ಕುಗಳನ್ನು ಗೌರವಿಸೋಣ, ಮಕ್ಕಳು ಸುರಕ್ಷಿತವಾಗಿದ್ದರೆ ಸಮಾಜ ಸುರಕ್ಷಿತವಾಗಿರುತ್ತದೆ ಎಂಬ ಈ ಘೋಷಣೆಯನ್ನು ಬ್ಯಾನರ್ ಬಿಡಿಸುವ ಮೂಲಕ ಅನುಗ್ರಹ ಟ್ರೈನಿಂಗ್ ಕಾಲೇಜು ಬೆಳ್ತಂಗಡಿ ಇದರ ಮ್ಯಾನೇಜಿಂಗ್ ಡೈರೆಕ್ಟರ್ ತಲ್ಹತ್ ಎಂ.ಜಿ ರವರು ಉದ್ಘಾಟಿಸಿದರು.

ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ಜಿಲ್ಲಾ ಸಂಚಾಲಕರಾದ ಮಹಮ್ಮದ್ ರಫೀಕ್ ದರ್ಬೆ ಇವರು ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಹೇಳಿದರು .
ದಕ್ಷಿಣ ಕನ್ನಡ ಜಿಲ್ಲಾ ಬಾಲ ನ್ಯಾಯಮಂಡಳಿಯ ನಿಕಟ ಪೂರ್ವ ಸದಸ್ಯರು ಮತ್ತು ಪಡಿ ಸಂಸ್ಥೆಯ ಸಂಯೋಜಕರಾದ ಕಸ್ತೂರಿ ಬೊಳುವಾರು ಇವರು ಸಮಾಜ ಸುಭದ್ರವಾಗಿದ್ದರೆ ಅಲ್ಲಿ ಮಕ್ಕಳು ಭದ್ರವಾಗಿರುತ್ತಾರೆ, ಮಕ್ಕಳನ್ನು ಅವರ ಹಕ್ಕುಗಳಿಂದ ವಂಚಿತರಾಗದಂತೆ ರಕ್ಷಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಹದಿಹರೆಯದಲ್ಲಿ ಮಕ್ಕಳು ತಮ್ಮ ಜೀವನದ ಗುರಿಯನ್ನು ನಿರ್ಧರಿಸುವಲ್ಲಿ ಸಮಾಜವು ಮಕ್ಕಳಿಗೆ ಸಹಕಾರಿಯಾಗಬೇಕು ಎಂದು ಹೇಳಿದರು. ಮಕ್ಕಳ ರಕ್ಷಣೆಗೆ ಹಲವಾರು ಕಾನೂನುಗಳು ಇದ್ದರೂ ಕೂಡ ಮಕ್ಕಳು ಒಂದಲ್ಲ ಒಂದು ಸಮಸ್ಯೆಗಳಿಗೆ ಒಳಗಾಗುವುದನ್ನು ನೋಡುತ್ತಿದ್ದೇವೆ ಅದಕ್ಕಾಗಿ ಪ್ರತಿಯೊಬ್ಬರನ್ನು ಜಾಗೃತಗೊಳಿಸುವ ಅಗತ್ಯತೆ ಇದೆ ಎಂದು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಜಿಲ್ಲಾ ಸಹ ಸಂಚಾಲಕರಾದ ರಮಾನಂದ ಸಾಲಿಯಾನ್ ಮುಂಡೂರು ಹೇಳಿದರು.

ಬೆಳ್ತಂಗಡಿ ತಾಲೂಕು ಮಕ್ಕಳ ಹಕ್ಕುಗಳ ಮಹೋತ್ಸವ ಸಮಿತಿಯ ಸಹ ಸಂಚಾಲಕರಾದ ಮಹಮ್ಮದ್ ನಜೀರ್ ಎಚ್ ಮಾತನಾಡಿ ಹಲವಾರು ಮಕ್ಕಳು ಸರಕಾರ ನಿಗದಿಪಡಿಸಿರುವ ವೈಯಕ್ತಿಕ ದಾಖಲೆಗಳನ್ನು ಹೊಂದಿರದ ಕಾರಣ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ವಂಚಿತರಾಗುತ್ತಿದ್ದಾರೆ ಈ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಅನುಗ್ರಹ ಟ್ರೈನಿಂಗ್ ಕಾಲೇಜು ನಿರ್ದೇಶಕರಾದ ತೌಸಿಫ್ ಕಕ್ಕಿಂಜೆ ರವರು ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಬೆಳ್ತಂಗಡಿ ತಾಲೂಕು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ತಾಲೂಕು ಸಂಚಾಲಕ ಅಬ್ದುಲ್ ಖಾದರ್ ನಾವೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಈ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲ ಸಂಘ-ಸಂಸ್ಥೆಗಳು ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಬೆಳ್ತಂಗಡಿ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಪದಾಧಿಕಾರಿಗಳಾದ ಶ್ರೀಮತಿ ಜಲಜಾಕ್ಷಿ ಗುರುವಾಯನಕೆರೆ ಮತ್ತು ನವೀನ್ ಮೇಲಂತಬೆಟ್ಟು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನುಗ್ರಹ ಟ್ರೈನಿಂಗ್ ಕಾಲೇಜಿನ ಫೈರ್ ಅಂಡ್ ಸೇಫ್ಟಿ ವಿಭಾಗದ ಮುಖ್ಯಸ್ಥೆ ಅಂಕಿತ ಕಾರ್ಯಕ್ರಮವನ್ನು ನಿರೂಪಿಸಿದರು. ಶಮೀಮ ವಂದಿಸಿದರು.

Related posts

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Suddi Udaya

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya
error: Content is protected !!