September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮವು ನ.16 ರಂದು ದುಬೈಯ ಆಶೀಯಾನ ಫಾರ್ಮ್ ಹೌಸ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ,ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಸಾಧನೆ ಮಾಡಿದ ಮಕ್ಕಳಿಗೆ ಹಾಗೂ ಉದ್ಯಮಿಗಳಿಗೆ ಸನ್ಮಾನ ಮಾಡಿ ಗೌರವಿಸಿಲಾಯಿತು. ಮಧ್ಯಾಹ್ನದ ಭೋಜನ ನಂತರ ಗೌಡ ಸಮಾಜದ ಸದಸ್ಯರುಗಳಿಗೆ ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಟವನ್ನು ಏರ್ಪಡಿಸಲಾಯಿತು. ಸಮ್ಮೇಳನದ ಮುಖ್ಯ ಆಯೋಜಕರಾಗಿ ಹರೀಶ್ ಕೋಡಿ, ಸುರೇಶ್ ಕುಂಪಲ, ಸುನಿಲ್ ಮೊಟ್ಟೆ ಮನೆ, ತೇಜ ಕುಮಾರ್ ಕೊರಂಬಡ್ಕ, ಮೋಹನ್ ಕಡoಬಳ, ದಿಲೀಪ್ ಉಳುವಾರ, ಶರತ್ ಚೋಕ್ಕಾಡಿ,ರೋಶನ್ ಕಂಪ, ಸುಪ್ರೀತ್ ಕುಂಡಡ್ಕ, ಜೀವನ್ ಗೌಡ ಕುಂಜತಾಡಿ, ಯತೀಶ್ ಗೌಡ, ರತೀಶ್ ಬಗ್ಗನ ಮನೆ, ಆಶೀಶ್ ಕೋಡಿ, ಮೀನಾ ಹರೀಶ್ ಕೋಡಿ, ಪುಲೋಮ ಮಹೇಂದ್ರ ಕೊಳಂಬೆ, ಹಾಗೂ ಇತರ ಸದಸ್ಯರು ಶ್ರಮಿಸಿದ್ದರು.

ಯು ಎ ಇ ಯ ವಿವಿಧ ಎಮಿರೇಟ್ಸ್ನಲ್ಲಿ ನೆಲೆಸಿರುವ ಸುಮಾರು 300 ಕ್ಕೂ ಮಿಕ್ಕಿದ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗೌಡ ಬಾಂಧವರು ಈ ಸುಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾರಂಭ ದ ಅಧ್ಯಕ್ಷತೆಯನ್ನು ಹೊದ್ದೆಟ್ಟಿ ರಾಮಚಂದ್ರ ವಹಿಸಿಕೊಂಡಿದ್ದು, ಮುಖ್ಯ ಅತಿಥಿಯಾಗಿ ಮುಕ್ಕಾಟಿ ಕಿಶೋರ್ ಭಾಗವಹಿಸಿದ್ದರು. ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆಯನ್ನು ನಿತಿನ್ ದೊರ್ತೋಡಿ ಸಾರಥ್ಯದೊಂದಿಗೆ ಯುವ ನಿರೂಪಕಿ ಶ್ರಾವ್ಯ ಗೌಡ ಹಾಗೂ ರಕ್ಷಿತಾ ಸುಪ್ರೀತ್ ನೆರವೇರಿಸಿದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya
error: Content is protected !!