July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ನಾರಾವಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಸುಲ್ಕೇರಿ ಶ್ರೀರಾಮ ಶಾಲೆ, ಯಲ್ಲಿ ನಡೆದಿದ್ದು, ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ, ಎಂಟನೇ ತರಗತಿಯ ಕು. ಪ್ರಿಯಾ ಭಾವಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಎಂಟನೇ ತರಗತಿಯ ಕು. ಚಿನ್ಮಯಿ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಮತ್ತು ಚರ್ಚಾ ಸ್ಪರ್ಧೆ ಯಲ್ಲಿ ತೃತೀಯ ಸ್ಥಾನ , ಜಾನಪದ ನೃತ್ಯ ಕು ಪ್ರಾಪ್ತಿ 8ನೇ ತರಗತಿ , ಕು. ಅನನ್ಯ ಎಂಟನೇ ತರಗತಿ, ಕುಮಾರಿ ಸಾನ್ವಿ 8ನೇ ತರಗತಿ , ಕುಮಾರಿ ದೃಶ್ಯ 8ನೇ ತರಗತಿ, ಕುಮಾರಿ ಸಾನ್ವಿ 9ನೇ ತರಗತಿ, ಕುಮಾರಿ ರಕ್ಷಾ 9ನೇ ತರಗತಿ ಇವರು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆ ಚ್ ಹಾಗೂ ಸಂಚಾಲಕ ಅಶ್ವಿತ್ ಕುಲಾಲ್ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ. ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಸುಚಿತ್ರ ಮತ್ತು ಕುಮಾರಿ ಅನುಷಾ ಇವರು ವಿದ್ಯಾರ್ಥಿಗಳಿಗೆ ಸಹಕರಿಸಿರುತ್ತಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya
error: Content is protected !!