July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು ಮುಖ್ಯಸ್ಥರಿಗೆ ಸರ್ವೋಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ ೫/೨೦೨೫ ರಲ್ಲಿ ನೀಡಿರುವ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಮುಖ್ಯಾಧಿಕಾರಿಯವರಿಗೆ ತಿಳಿಸುವಂತೆ ಮುಖ್ಯಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

1. ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸುವುದು.
2. ಬೆಳ್ತಂಗಡಿ ಪಟ್ಟಣ ಪಂಚಾಯತ್ ವತಿಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು.
3.ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿAದ ವಸೂಲಿ ಮಾಡಲಾಗುವುದು.
4.ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ದ ಕಾನೂನು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ರಕ್ತೇಶ್ವರಿ ಪದವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya
error: Content is protected !!