22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮವು ನ.16 ರಂದು ದುಬೈಯ ಆಶೀಯಾನ ಫಾರ್ಮ್ ಹೌಸ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ,ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಸಾಧನೆ ಮಾಡಿದ ಮಕ್ಕಳಿಗೆ ಹಾಗೂ ಉದ್ಯಮಿಗಳಿಗೆ ಸನ್ಮಾನ ಮಾಡಿ ಗೌರವಿಸಿಲಾಯಿತು. ಮಧ್ಯಾಹ್ನದ ಭೋಜನ ನಂತರ ಗೌಡ ಸಮಾಜದ ಸದಸ್ಯರುಗಳಿಗೆ ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಟವನ್ನು ಏರ್ಪಡಿಸಲಾಯಿತು. ಸಮ್ಮೇಳನದ ಮುಖ್ಯ ಆಯೋಜಕರಾಗಿ ಹರೀಶ್ ಕೋಡಿ, ಸುರೇಶ್ ಕುಂಪಲ, ಸುನಿಲ್ ಮೊಟ್ಟೆ ಮನೆ, ತೇಜ ಕುಮಾರ್ ಕೊರಂಬಡ್ಕ, ಮೋಹನ್ ಕಡoಬಳ, ದಿಲೀಪ್ ಉಳುವಾರ, ಶರತ್ ಚೋಕ್ಕಾಡಿ,ರೋಶನ್ ಕಂಪ, ಸುಪ್ರೀತ್ ಕುಂಡಡ್ಕ, ಜೀವನ್ ಗೌಡ ಕುಂಜತಾಡಿ, ಯತೀಶ್ ಗೌಡ, ರತೀಶ್ ಬಗ್ಗನ ಮನೆ, ಆಶೀಶ್ ಕೋಡಿ, ಮೀನಾ ಹರೀಶ್ ಕೋಡಿ, ಪುಲೋಮ ಮಹೇಂದ್ರ ಕೊಳಂಬೆ, ಹಾಗೂ ಇತರ ಸದಸ್ಯರು ಶ್ರಮಿಸಿದ್ದರು.

ಯು ಎ ಇ ಯ ವಿವಿಧ ಎಮಿರೇಟ್ಸ್ನಲ್ಲಿ ನೆಲೆಸಿರುವ ಸುಮಾರು 300 ಕ್ಕೂ ಮಿಕ್ಕಿದ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗೌಡ ಬಾಂಧವರು ಈ ಸುಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾರಂಭ ದ ಅಧ್ಯಕ್ಷತೆಯನ್ನು ಹೊದ್ದೆಟ್ಟಿ ರಾಮಚಂದ್ರ ವಹಿಸಿಕೊಂಡಿದ್ದು, ಮುಖ್ಯ ಅತಿಥಿಯಾಗಿ ಮುಕ್ಕಾಟಿ ಕಿಶೋರ್ ಭಾಗವಹಿಸಿದ್ದರು. ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆಯನ್ನು ನಿತಿನ್ ದೊರ್ತೋಡಿ ಸಾರಥ್ಯದೊಂದಿಗೆ ಯುವ ನಿರೂಪಕಿ ಶ್ರಾವ್ಯ ಗೌಡ ಹಾಗೂ ರಕ್ಷಿತಾ ಸುಪ್ರೀತ್ ನೆರವೇರಿಸಿದರು.

Related posts

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವ, ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya

ನೀಟ್ ಪ್ರತಿಭಟನೆಕಾರರ ಮೇಲಿನ ಹಲ್ಲೆ ಖಂಡನೀಯ : ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

Suddi Udaya
error: Content is protected !!